ಗುರುಬೆಳದಿಂಗಳು ನೇತೃತ್ವದಲ್ಲಿ ಮನೆ ಹಸ್ತಾಂತರ

ಬಂಟ್ವಾಳ: ಮಂಗಳೂರಿನ ಗುರುಬೆಳದಿಂಗಳು ಸಂಸ್ಥೆಯ ನೇತೃತ್ವದಲ್ಲಿ ದಾನಿಗಳ ಸಹಕಾರದೊಂದಿಗೆ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಪರಾರಿ ಎಂಬಲ್ಲಿ ನಿರ್ಮಾಣಗೊಂಡ ಚಿತ್ರಾಕ್ಷಿ ಅವರ ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ಗುರುವಾರ ನಡೆಯಿತು. ಪಣಂಬೂರು ಎಸಿಪಿ ಮಹೇಶ್ ಕುಮಾರ್ ಅವರು ಈ ಸಂದರ್ಭ ನಡೆದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಹಲವಾರು ಗೃಹಪ್ರವೇಶಕ್ಕೆ ಹೋಗಿದ್ದೇನೆ. ಆದರೆ ಇದೊಂದು ಹೃದಯಸ್ಪರ್ಷಿ ಗೃಹಪ್ರವೇಶದ ಕಾರ್ಯಕ್ರಮ ಎಂದರು. ಯುವಕರ ತಂಡವನ್ನು ಕಟ್ಟಿಕೊಂಡು ಸಮಾಜಕ್ಕೆ ಆಸರೆಯಾಗುವಂತಹ ಕಾರ್ಯಕ್ರಮವನ್ನು ಗುರುಬೆಳದಿಂಗಳು ತಂಡ ಮಾಡುತ್ತಿದೆ. ಇಂತಹ ಸಂಘ ಸಂಸ್ಥೆಗಳ ಅಗತ್ಯತೆ ಸಮಾಜಕ್ಕೆ ಇದೆ.‌ ಇದು ಯುವ ಸಮುದಾಯಕ್ಕೆ ಮಾದರಿ ಎಂದು ತಿಳಿಸಿದರು.

ಗುರು ಬೆಳದಿಂಗಳು ಸಂಘಟನೆಯ ಅಧ್ಯಕ್ಷ ಪದ್ಮರಾಜ್ ಆರ್. ಅಧ್ಯಕ್ಷತೆ ವಹಿಸಿ ಮಾತನಾಡಿ ಗುರುಬೆಳದಿಂಗಳು ಸಂಘಟನೆಗೆ ಇಂತಹ ಸೇವಾ ಕಾರ್ಯಗಳನ್ನು ಮಾಡಲುವ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶ, ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಯವರು ಗೋಕರ್ಣ ಕ್ಷೇತ್ರದಲ್ಲಿ ಮಾಡಿದ ಜನಪರ ಕಾರ್ಯ ಪ್ರೇರಣೆ ನೀಡಿದೆ. ಬಡವರ ಕಣ್ಣೊರೆಸುವ ಕಾರ್ಯ ಆಗಬೇಕು ಎನ್ನುವ ನಿಟ್ಟಿನಲ್ಲಿ ಶಿಕ್ಷಣ, ಆರೋಗ್ಯ, ಆಸರೆ ಎನ್ನುವ ಧ್ಯೆಯೋದ್ದೇಶಗಳನ್ನಿಟ್ಟುಕೊಂಡು ಇಂತಹ ಸೇವಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಯುವಕರ ಪರಿಶ್ರಮದಿಂದ ಹಾಗೂ ಹಲವು ಮಂದಿ ದಾನಿ ಸಹಕಾರದಿಂದ ಮನೆ ನಿರ್ಮಾಣಗೊಂಡಿದೆ ಎಂದು ತಿಳಿಸಿದರು. ಗೋಕರ್ಣ ಕ್ಷೇತ್ರದ ಅಭಿವೃದ್ದಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ವಿವೇಕ್ ರಾಜ್ ಪೂಜಾರಿ, ಉದ್ಯಮಿಗಳಾದ ಕಿಶೋರ್ ದಂಡಕೇರಿ, ವಿಷ್ಣುದಾಸ್, ಎಂಸಿಸಿ ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೋ, ಮನಪಾ ಸದಸ್ಯರಾದ ಪ್ರವೀಣ್ ಚಂದ್ರ ಆಳ್ವ, ಅನಿಲ್ ಕುಮಾರ್ ಪೂಜಾರಿ, ಪ್ರಮುಖರಾದ ರಾಜೇಂದ್ರ ಚಿಲಿಂಬಿ ವಿಷ್ಣುದಾಸ್ ಉಪಸ್ಥಿತರಿದ್ದರು. ಸಂಚಾಲಕ ಸುನೀಲ್ ಕುಮಾರ್ ಬಜಾಲ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ‌ಕಾರ್ಯದರ್ಶಿ ರಾಜೇಶ್ ಸುವರ್ಣ ವಂದಿಸಿದರು.‌ ಮನೆ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಗುರುಬೆಳದಿಂಗಳು ನೇತೃತ್ವದಲ್ಲಿ ಮನೆ ಹಸ್ತಾಂತರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*