ಬಂಟ್ವಾಳ: ಗಾಂಜಾ ದಾಸ್ತಾನು ವಶಕ್ಕೆ, ಆರೋಪಿ ಬಂಧನ

ಬಂಟ್ವಾಳ: ಗಾಂಜಾವನ್ನು ದಾಸ್ತಾನಿರಿಸಿ, ವಿತರಣೆ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಬಂಟ್ವಾಳ ಪೊಲೀಸರು, ಸಜಿಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ದಾಳಿ ಮಾಡಿ, ಆರೋಪಿ ಇಕ್ಬಾಲ್ ಯಾನೆ ಕಡ್ಲೆ ಇಕ್ಬಾಲ್ ಎಂಬಾತನನ್ನು ಬಂಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಬಂಟ್ವಾಳ ತಾಲೂಕಿನಾದ್ಯಂತ ಅಕ್ರಮವಾಗಿ ಗಾಂಜಾ ಶೇಖರಿಸಿ ವಿತರಣೆ ಮಾಡುತ್ತಿದ್ದ ಮತ್ತು ಈ ಹಿಂದೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ನಿಗಾ ಇಡಲು ದ.ಕ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ಬಂಟ್ವಾಳ ಉಪಾಧೀಕ್ಷಕ ವೆಲಂಟೈನ್ ಡಿಸೋಜ ನಿರ್ದೇಶನದಂತೆ ಬಂಟ್ವಾಳ ತಾಲೂಕಿನಲ್ಲಿ ಅಕ್ರಮ ಗಾಂಜಾ ಪತ್ತೆ ಹಚ್ಚಲು ತಂಡವನ್ನು ರಚಿಸಿದ್ದು ಅದರಂತೆ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕರಾದ ಟಿ.ಡಿ ನಾಗರಾಜ್ ನೇತೃತ್ವದ ತಂಡ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಸುಮಾರು 30 ಸಾವಿರ ರೂ  ಮೌಲ್ಯದ 1 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಕ್ಬಾಲ್ ನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಪ್ರಕರಣದ ಸಹ ಆರೋಪಿಗಳಾದ ಸಜೀಪನಡುವಿನ ಎಸ್.ಕೆ ರಫೀಕ್ ಮತ್ತು ಕಂಚಿನಡ್ಕ ಪದವಿನ ಮೋನು ಯಾನೆ ಪಿಲಿ ಮೋನು ತಲೆಮರೆಸಿಕೊಂಡಿರುತ್ತಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ. ಎಂ.ಎಸ್, ವಿಶೇಷ ತಂಡದ ಸದಸ್ಯರಾದ ಉದಯ ರವಿ, ಜನಾರ್ಧನ, ಸುರೇಶ್, ಪ್ರವೀಣ್, ಗೋಣಿಬಸಪ್ಪ, ಇರ್ಷಾದ್, ವಿವೇಕ್, ಕುಮಾರ್ ರವರ ತಂಡ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ: ಗಾಂಜಾ ದಾಸ್ತಾನು ವಶಕ್ಕೆ, ಆರೋಪಿ ಬಂಧನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*