ಬಂಟ್ವಾಳ

ಬಂಟ್ವಾಳ: ಗಾಂಜಾ ದಾಸ್ತಾನು ವಶಕ್ಕೆ, ಆರೋಪಿ ಬಂಧನ

ಬಂಟ್ವಾಳ: ಗಾಂಜಾವನ್ನು ದಾಸ್ತಾನಿರಿಸಿ, ವಿತರಣೆ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಬಂಟ್ವಾಳ ಪೊಲೀಸರು, ಸಜಿಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ದಾಳಿ ಮಾಡಿ, ಆರೋಪಿ ಇಕ್ಬಾಲ್ ಯಾನೆ ಕಡ್ಲೆ ಇಕ್ಬಾಲ್ ಎಂಬಾತನನ್ನು ಬಂಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆ ಮತ್ತು ಬಂಟ್ವಾಳ ತಾಲೂಕಿನಾದ್ಯಂತ ಅಕ್ರಮವಾಗಿ ಗಾಂಜಾ ಶೇಖರಿಸಿ ವಿತರಣೆ ಮಾಡುತ್ತಿದ್ದ ಮತ್ತು ಈ ಹಿಂದೆ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ನಿಗಾ ಇಡಲು ದ.ಕ. ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಮತ್ತು ಬಂಟ್ವಾಳ ಉಪಾಧೀಕ್ಷಕ ವೆಲಂಟೈನ್ ಡಿಸೋಜ ನಿರ್ದೇಶನದಂತೆ ಬಂಟ್ವಾಳ ತಾಲೂಕಿನಲ್ಲಿ ಅಕ್ರಮ ಗಾಂಜಾ ಪತ್ತೆ ಹಚ್ಚಲು ತಂಡವನ್ನು ರಚಿಸಿದ್ದು ಅದರಂತೆ ಖಚಿತ ಮಾಹಿತಿಯ ಮೇರೆಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ನಿರೀಕ್ಷಕರಾದ ಟಿ.ಡಿ ನಾಗರಾಜ್ ನೇತೃತ್ವದ ತಂಡ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಸುಮಾರು 30 ಸಾವಿರ ರೂ  ಮೌಲ್ಯದ 1 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಕ್ಬಾಲ್ ನನ್ನು ದಸ್ತಗಿರಿ ಮಾಡಲಾಗಿರುತ್ತದೆ. ಪ್ರಕರಣದ ಸಹ ಆರೋಪಿಗಳಾದ ಸಜೀಪನಡುವಿನ ಎಸ್.ಕೆ ರಫೀಕ್ ಮತ್ತು ಕಂಚಿನಡ್ಕ ಪದವಿನ ಮೋನು ಯಾನೆ ಪಿಲಿ ಮೋನು ತಲೆಮರೆಸಿಕೊಂಡಿರುತ್ತಾರೆ. ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ. ಎಂ.ಎಸ್, ವಿಶೇಷ ತಂಡದ ಸದಸ್ಯರಾದ ಉದಯ ರವಿ, ಜನಾರ್ಧನ, ಸುರೇಶ್, ಪ್ರವೀಣ್, ಗೋಣಿಬಸಪ್ಪ, ಇರ್ಷಾದ್, ವಿವೇಕ್, ಕುಮಾರ್ ರವರ ತಂಡ ದಾಳಿಯಲ್ಲಿ ಪಾಲ್ಗೊಂಡಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.