ನಿಲ್ಲದ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

ಬಂಟ್ವಾಳ ತಾಲೂಕಿನಾದ್ಯಂತ ವ್ಯಾಪಕ ಹಾನಿ

ಬಂಟ್ವಾಳ: ಭಾನುವಾರ ಸುರಿದ ಧಾರಾಕಾರ ಮಳೆಗೆ ಬಂಟ್ವಾಳ ತಾಲೂಕಿನ ಹಲವೆಡೆ ಮನೆ, ತೋಟಗಳಿಗೆ ಹಾನಿಯಾಗಿದ್ದರೆ, ಕೆಲವೆಡೆ ಗುಡ್ಡ ಜರಿದಿದೆ. ಇನ್ನು ಕೆಲವೆಡೆ ವಿದ್ಯುತ್ ಕಂಬಗಳು ಧರಾಶಾಹಿಯಾದರೆ, ರಸ್ತೆ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ಸಂಚಾರ ದುಸ್ತರವಾಗಿದೆ.

ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ನಗ್ರಿ ಎಂಬಲ್ಲಿ ಗುಡ್ಡ ಕುಸಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕೂಸಪ್ಪ ನಾಯ್ಕ ಎಂಬವರ ಮನೆ ಅಪಾಯದ ಸ್ಥಿತಿಯಲ್ಲಿರುವ ಹಿನ್ನೆಲೆಯಲ್ಲಿ ಅವರು ಕುಟುಂಬ ಸಮೇತ ನಾವೂರು ಗ್ರಾಮದ ಸಂಬಂಧಿಕರ ಮನೆಗೆ ಸ್ಥಳಾಂತರಗೊಂಡಿದ್ದಾರೆ. ಬೋಳಂತೂರು ಗ್ರಾಮದ ಕೊಕ್ಕಪುಣಿ ಎಂಬಲ್ಲಿ ನೇಮಕ್ಕು ಅವರ ವಾಸದ ಮನೆಯ ಹಿಂಬದಿಯಲ್ಲಿ ಬರೆ ಬಿದ್ದಿರುತ್ತದೆ, ಅಬ್ದುಲ್ ಖಾದ್ರಿ ರವರ ಮನೆಯ ಕಾಂಪೌಂಡ್ ಕುಸಿದು ಬಿದ್ದಿದೆ. ಗುಂಡಿಮಜಲು ಎಂಬಲ್ಲಿ ಚೆನ್ನಪ್ಪ ಪೂಜಾರಿ ಮನೆಯ ಹಿಂಬಾಗದ ತೊಡಿನ ತಡೆಗೋಡೆ ಕುಸಿದು ಬಿದ್ದಿದೆ. ಸಜಿಪಮುನ್ನೂರು ಗ್ರಾಮದ ಅಮೀನಮ್ಮ ಎಂಬವರ ಮನೆಯ ಒಂದು ಭಾಗದ ಮಣ್ಣಿನ ಗೋಡೆ ಕುಸಿದುಬಿದ್ದಿದೆ.

ಜಾಹೀರಾತು

ಭಾನುವಾರ ಸುರಿದ ಭಾರಿ ಮಳೆಗೆ ಬಿ.ಸಿ.ರೋಡ್ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಳಗಿನವಗ್ಗ, ಆಲಂಪುರಿ ಕ್ರಾಸ್ ಬಳಿ ರಸ್ತೆ ಬದಿ ಗುಡ್ಡ ಜರಿದು ಸುಮಾರು 50ಕ್ಕೂ ಅಧಿಕ ಅಡಕೆ ಮರಗಳು ಧರಾಶಾಹಿಯಾಗಿವೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ವೇಳೆ ರಸ್ತೆ ಬದಿಯ ಗುಡ್ಡವನ್ನು ಅಗೆದಿರುವುದು ಇದಕ್ಕೆ ಕಾರಣ ಎಂದು ಸ್ಥಳೀಯರು ಆಪಾದಿಸಿದ್ದಾರೆ. ಈಗಾಗಲೇ ರಸ್ತೆ ಇನ್ನೊಂದು ಬದಿಯಲ್ಲಿದ್ದ ಮನೆಯನ್ನು  ಹೆದ್ದಾರಿ ಕಾಮಗಾರಿ ವೇಳೆ ತೆರವುಗೊಳಿಸಿದ್ದು, ತೋಟದ ಭಾಗದ ಜಾಗದಲ್ಲಿದ್ದ ಬಂಡೆಯನ್ನು ಒಡೆದು ಹಾಕಲಾಗಿತ್ತು. ಬಂಟ್ವಾಳ ಕಸಬಾ ಗ್ರಾಮದ ಮುಗ್ದಲ್ ಗುಡ್ಡೆ ಎಂಬಲ್ಲಿ ಶಕುಂತಲಾ ರವರ ಮನೆ ಕುಸಿದು ಪೂರ್ಣ ಹಾನಿ ಆಗಿದೆ. ಬಂಟ್ವಾಳ ಕಸಬಾ ಗ್ರಾಮ ದ ಮಣಿ ಎಂಬಲ್ಲಿ ಬಾಲಕೃಷ್ಣ ಗೌಡ ಬಿನ್ ಸಂಜೀವ ಗೌಡ  ಅವರ ಆವರಣ ಗೋಡೆ ಕುಸಿದಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.  ಬಿ.ಸಿ.ರೋಡ್ ಮೊಡಂಕಾಪು ದೀಪಿಕಾ ಹೈಸ್ಕೂಲು ಕಂಪೌಂಡ್ ಮಳೆಗೆ ಕುಸಿದಿದೆ.ವಿಟ್ಲ ಪಡ್ನೂರು ಗ್ರಾಮದ ಕೊಡಂಗೆ ನಿವಾಸಿ ಸುನೀಲ್ ಪಾಯಸ್ ಅವರಿಗೆ ಸೇರಿದ ಕೃಷಿ ತೋಟದಲ್ಲಿದ್ದ  ಅಡಿಕೆ ಮರಗಳು ಗುಡ್ಡ ಸಹಿತ ಪಕ್ಕದ  ಮನೆಯಂಗಳಕ್ಕೆ ಬಿದ್ದಿದೆ. ಗುಡ್ಡದ ಪಕ್ಕದಲ್ಲಿದ್ದ  ಸುಮಾರು 100 ಕ್ಕಿಂತಲೂ ಅಧಿಕ ಅಡಿಕೆ ಮರಗಳು ನೆಲಸಮವಾಗಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನಿಲ್ಲದ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*