ಬಂಟ್ವಾಳ

ರೋಟರಿ ಕ್ಲಬ್ ಬಂಟ್ವಾಳ ಟೌನ್ ಪದಗ್ರಹಣ ಕಾರ್ಯಕ್ರಮ

ಜಗತ್ತಿಗೆ ಸಂಕಟ ಬಂದಾಗ ನೆರವಾದ ಸಂಸ್ಥೆ ರೋಟರಿ: ಅಭಿನಂದನ್ ಎ.ಶೆಟ್ಟಿ

ಬಂಟ್ವಾಳ: ಕೊರೊನಾದಂಥ ಸಂಕಟದ ಸನ್ನಿವೇಶಗಳು ಜಾಗತಿಕ ಮಟ್ಟದಲ್ಲಿ ಬಂದಾಗ ರೋಟರಿ ಸಂಸ್ಥೆ ಅವುಗಳ ವಿರುದ್ಧ ಹೋರಾಟ ನಡೆಸುವುದರಲ್ಲಿ ಮುಂಚೂಣಿಯಲ್ಲಿದ್ದುಕೊಂಡು, ಜನಸಾಮಾನ್ಯರಿಗೆ ನೆರವಾಗುವ ಕೆಲಸವನ್ನು ಮಾಡುತ್ತಿದೆ. ರೋಟರಿ ಸದಸ್ಯರಾಗುವುದು ಒಂದು ಅಪೂರ್ವ ಅವಕಾಶ ಎಂದು ರೋಟರಿ ಜಿಲ್ಲೆ 3182ರ ಪಾಸ್ಟ್ ಡಿಸ್ಟ್ರಿಕ್ಟ್ ಗವರ್ನರ್ ಅಭಿನಂದನ್ ಎ.ಶೆಟ್ಟಿ ಹೇಳಿದ್ದಾರೆ.

ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ಭಾನುವಾರ ಸಂಜೆ ರೋಟರಿ ಕ್ಲಬ್ ಬಂಟ್ವಾಳ ಟೌನ್ ಘಟಕದ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ಕಾರ್ಯವನ್ನು ನೆರವೇರಿಸಿ ಅವರು ಶುಭ ಹಾರೈಸಿದರು.

ಜಾಹೀರಾತು

ಹಿಂದೆ ಪೊಲಿಯೋ ನಿರ್ಮೂಲನೆಗೆ ರೋಟರಿ ಕೈಗೊಂಡ ಪಾತ್ರವನ್ನು ಜಗತ್ತೇ ಮೆಚ್ಚುತ್ತಿದೆ. ಈ ಬಾರಿ ಕೊರೊನಾ ಸಂದರ್ಭವೂ ಸಂಸ್ಥೆ ಉತ್ತಮ ಕಾರ್ಯ ನಡೆಸುತ್ತಿದೆ. ಲಾಕ್ ಡೌನ್ ಇದ್ದರೂ ಜನಮಾನಸಕ್ಕೆ ಸ್ಪಂದಿಸುವ ಕೆಲಸವನ್ನು ರೋಟರಿ ಮಾಡುತ್ತಿದೆ. ಜಗತ್ತಿನ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ರೋಟರಿ ಮಾಡಿದೆ ಎಂದು ಅವರು ಹೇಳಿದರು.

ಅಧ್ಯಕ್ಷರಾಗಿ ಶನ್ ಫತ್  ಶರೀಫ್, ಕಾರ್ಯದರ್ಶಿಯಾಗಿ ಬೊಂಡಾಲ ಚಿತ್ತರಂಜನ್ ಶೆಟ್ಟಿ, ಕೋಶಾಧಿಕಾರಿಯಾಗಿ ಸುರೇಶ್ ಎನ್. ಸಾಲಿಯಾನ್, ಪದಾಧಿಕಾರಿಗಳಾಗಿ ಉಮೇಶ್ ಮೂಲ್ಯ, ಹಂಝ ಬಸ್ತಿಕೋಡಿ, ಕಿಶೋರ್ ಕುಮಾರ್, ದೇಜಪ್ಪ ಪೂಜಾರಿ, ಸುರೇಶ್ ನಾವೂರು, ಮಹಮ್ಮದ್ ಹನೀಫ್, ಜಯರಾಜ್ ಎಸ್.ಬಂಗೇರ, ಸುಧಾಕರ ಸಾಲಿಯಾನ್, ನಾಗೇಶ್, ಡಾ.ಸಂತೋಷ್ ಬಾಬು, ಗಾಯತ್ರಿ ಲೋಕೇಶ್, ಮುನೀರ್, ಸುರೇಶ್ ಪಿ, ನಾರಾಯಣ ಪೆರ್ನೆ, ಸುಕುಮಾರ್ ಬಂಟ್ವಾಳ ಸಹಿತ ಪದಾಧಿಕಾರಿಗಳು ಅಧಿಕಾರ ಸ್ವೀಕರಿಸಿದರೆ, ಹೊಸ ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು.

ವಲಯ ನಾಲ್ಕರ ಸಹಾಯಕ ಗವರ್ನರ್ ಜಿ.ಸುರೇಂದ್ರ ಕಿಣಿ, ವಲಯ ಕಾರ್ಯದರ್ಶಿ ಜಯರಾಮ ರೈ, ವಲಯ ಲೆಫ್ಟಿನೆಂಟ್ ಅವಿಲ್ ಮಿನೇಜಸ್, ಮೊಡಂಕಾಪು ದೀಪಿಕಾ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ವರ ಹೆಬ್ಬಾರ ಶುಭ ಹಾರೈಸಿದರು. ಕ್ಲಬ್ ಮಾಜಿ ಅಧ್ಯಕ್ಷ ಜಯರಾಜ್ ಎಸ್.ಬಂಗೇರ ಸ್ವಾಗತಿಸಿದರು. ನಿರ್ಗಮನ ಕಾರ್ಯದರ್ಶಿ ಕಿಶೋರ್, ಆನ್ಸ್ ಕ್ಲಬ್ ಅಧ್ಯಕ್ಷೆ ಸವಿತಾ ಸಿ.ಶೆಟ್ಟಿ ವರದಿ ವಾಚಿಸಿದರು. ಈ ಸಂದರ್ಭ ಕಣ್ಣಿದ ದೃಷ್ಟಿ ಕಳೆದುಕೊಂಡ ಹೇಮಂತ್ ಪೂಜಾರಿ ಅವರ ಚಿಕಿತ್ಸೆಗೆ ಧನಸಹಾಯವನ್ನು ಮಾಡಲಾಯಿತು. ನೂತನ ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ವಂದಿಸಿದರು. ರೊಟೇರಿಯನ್ ಗಳಾದ ನ್ಯಾಯವಾದಿಗಳಾದ ಕೆ. ನರೇಂದ್ರನಾಥ ಭಂಡಾರಿ ಮತ್ತು ಸುರೇಶ್ ನಾವೂರು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts