ಜಿಲ್ಲಾ ಸುದ್ದಿ

ಹೆದ್ದಾರಿಗೆ ಬೇಲಿ ಹಾಕಿ ನಾವೂರು ಹಳೆಗೇಟಿನಲ್ಲಿ ಪ್ರತಿಭಟನೆ: ಜಾಗ ಕೊಟ್ಟರೂ ಪರಿಹಾರ ಇನ್ನೂ ದೊರಕದ ಕುರಿತು ಆಕ್ರೋಶ

ಪರಿಹಾರ ನೀಡಲು ಒಂದು ತಿಂಗಳ ಗಡುವು ನೀಡಿದ ಸಂತ್ರಸ್ತರು

ಬಿ.ಸಿ.ರೋಡ್ ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ಅಗಲಗೊಳ್ಳುವ ಕಾರ್ಯ ನಡೆಸುವ ಸಂದರ್ಭ ಭೂಸ್ವಾಧೀನ ಮಾಡಿದರೂ ಪರಿಹಾರ ಇನ್ನೂ ದೊರಕಿಲ್ಲ ಎಂದು ಆರೋಪಿಸಿ ಸ್ಥಳೀಯ ಸಂತ್ರಸ್ತರು ಹೆದ್ದಾರಿ ಮಧ್ಯೆ ಬೇಲಿ ಹಾಕಿ ಮಂಗಳವಾರ ನಾವೂರಿನ ಹಳೇಗೇಟು ಸಮೀಪ ಪ್ರತಿಭಟನೆ ನಡೆಸಿದರು. ಸ್ಥಳೀಯರಾದ ಸದಾನಂದ ನಾವೂರು ಅವರು ಹೆದ್ದಾರಿಗಾಗಿ ನೀಡಿದ ಜಾಗಕ್ಕೆ ಬೇಲಿ ಹಾಕಿ ಪ್ರತಿಭಟನೆಯನ್ನು ಆರಂಭಿಸಿದರು.

ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯಿಂದ ಬಂಟ್ವಾಳದವರೆಗಿನ ರಾಷ್ಟ್ರೀಯ ಹೆದ್ದಾರಿ ಅಗಲಗೊಳ್ಳುವ ಕಾರ್ಯ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲೂ ಭೂಸ್ವಾಧೀನ ಮಾಡಿಕೊಂಡು ಕಾಮಗಾರಿ ನಡೆಸಲಾಗುತ್ತಿದೆ. ಆದರೆ ಹಲವರಿಗೆ ಭೂಸ್ವಾಧೀನ ಮಾಡಿದರೂ ಪರಿಹಾರ ಇನ್ನೂ ಬಂದಿಲ್ಲ ಎಂಬುದಾಗಿ ಅವರು ಆರೋಪಿಸಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಪರಿಹಾರ ನೀಡಲು ಒಂದು ತಿಂಗಳು ಗಡುವನ್ನು ನೀಡಿರುವ ಪ್ರತಿಭಟನಾಕಾರರು, ಅಷ್ಟರೊಳಗೆ ಬೇಡಿಕೆ ಈಡೇರದೇ ಇದ್ದರೆ, ಹೆದ್ದಾರಿ ತಡೆಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts