ಬಂಟ್ವಾಳ

6 ಕೋಟಿ ರೂ ವೆಚ್ಚದಲ್ಲಿ ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರ ಮೇಲ್ದರ್ಜೆಗೆ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಸುಮಾರು 6 ಕೋಟಿ ವೆಚ್ಚದಲ್ಲಿ ಮಾಣಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುತ್ತದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.

ಮಾಣಿ ಗ್ರಾಮ ಪಂಚಾಯಿತಿ, ಅಪೋಲೋ ಸ್ಪೆಷಾಲಿಟಿ ಹಾಸ್ಪಿಟಲ್ ಬೆಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ, ಕರ್ನಾಟಕ ಪ್ರೌಢಶಾಲೆ ಮಾಣಿ, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮಾಣಿ, ರೋಟರಿ ಕ್ಲಬ್ ಬಂಟ್ವಾಳ ಸಂಯುಕ್ತ ಆಶ್ರಯದಲ್ಲಿ ಮಾಣಿ ಕರ್ನಾಟಕ ಪ್ರೌಢಶಾಲೆಯಲ್ಲಿ ನಡೆದ ಉಚಿತ ಕೋವಿಡ್ ಲಸಿಕಾ ಶಿಬಿರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಮಾಣಿ  ಕರ್ನಾಟಕ ಪ್ರೌಡ ಶಾಲಾ ರಸ್ತೆ ಅಭಿವೃದ್ದಿಗೆ 10 ಲಕ್ಷ ರೂ ಅನುದಾನವನ್ನು ನೀಡುವುದಾಗಿ ಇದೇ ವೇಳೆ ಅವರು ಭರವಸೆ ನೀಡಿದರು. ಈಗಾಗಲೇ ತಾಲೂಕಿನಲ್ಲಿ 1 ಲಕ್ಷ 70 ಸಾವಿರ ಲಸಿಕೆಯನ್ನು ನೀಡಲಾಗಿದೆ. ಅದರಲ್ಲಿ 60 ವರ್ಷ ಮೇಲ್ಪಟ್ಟ ಸುಮಾರು 90 ಶೇಕಡಾ ಜನರು ಒಳಗೊಂಡಿದ್ದಾರೆ ಎಂದರು.    

ಜಾಹೀರಾತು

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಭಿವರ್ಧಕ ಸಂಘ ಮಾಣಿ ಅಧ್ಯಕ್ಷ ಕಿರಣ್ ಹೆಗ್ಡೆ, ಉಪಾಧ್ಯಕ್ಷ ಮಹಮ್ಮದ್ ಹಬೀಬ್, ಕಾರ್ಯದರ್ಶಿ ಇಬ್ರಾಹಿಂ.ಕೆ.ಮಾಣಿ, ಸ್ಕೌಟ್ ಮತ್ತು ಗೈಡ್ಸ್ ಅಧ್ಯಕ್ಷ ಪ್ರಹ್ಲಾದ ಶೆಟ್ಟಿ ಜಡ್ತಿಲ, ಬಂಟ್ವಾಳ ರೋಟರಿ ಕ್ಲಬ್ ಕಾರ್ಯದರ್ಶಿ ಧನಂಜಯ ಬಾಳಿಗ, ಅಪೋಲೊ ಸ್ಪೆಶಾಲಿಟಿ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ಗಣೇಶ್ ನಾಗರಾಜ್ ಮತ್ತು ಆಯುಷ್, ಮುಖ್ಯೋಪಾಧ್ಯಾಯರಾದ ಬಿ.ಕೆ.ಭಂಡಾರಿ  ಪ್ರಾಥಮಿಕ ಆರೋಗ್ಯ ಕೇಂದ್ರ ದ ವೈದ್ಯಾಧಿಕಾರಿ ಡಾ. ಶಶಿಕಲಾ ಉಪಸ್ಥಿತರಿದ್ದರು. ಇದೇ ವೇಳೆ ಲಸಿಕಾ ಶಿಬಿರಕ್ಕೆ ಸಿಎಸ್.ಆರ್ ನಿಧಿ ಒದಗಿಸಲು ಶ್ರಮಿಸಿದ ಬೆಂಗಳೂರಿನ ಹಿರಿಯ ಪತ್ರಕರ್ತ ಬದ್ರುದ್ದೀನ್ ಕೆ. ಮಾಣಿ ಅವರಿಗೆ ಕೃತಜ್ಞತೆ ಸಲ್ಲಿಸಲಾಯಿತು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.