ಬಂಟ್ವಾಳ

ರೈ ಅವರದ್ದು ಹತಾಶೆಯ ಹೇಳಿಕೆ: ಬಂಟ್ವಾಳ ಬಿಜೆಪಿ

ಬಂಟ್ವಾಳ: ಜನಪ್ರಿಯರಾಗಿರುವ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಕಾರ್ಯವೈಖರಿಯಿಂದ ಹತಾಶರಾಗಿ ಮಾಜಿ ಸಚಿವ ರಮಾನಾಥ ರೈ ಆರೋಪಗಳನ್ನು ಮಾಡುತ್ತಿದ್ದು, ಇದು ಅದರಿಗೆ ಶೋಭೆ ತರುವುದಿಲ್ಲ. ಮಾಜಿ ಸಚಿವರ ಯಾವುದೇ ಆರೋಪಗಳನ್ನು ಕ್ಷೇತ್ರದ ಜನತೆ ನಂಬುವ ಸ್ಥಿತಿಯಲ್ಲಿಲ್ಲ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ದೇವಪ್ಪ ಪೂಜಾರಿ ಹೇಳಿದ್ದಾರೆ.

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದರೆ ಅಧಿಕಾರಿಗಳಿಗೆ ಮಾಹಿತಿ ನೀಡಿ ನಿಲ್ಲಿಸುವ ಕೆಲಸ ಮಾಡಲಿ ಎಂದರು. ಆಧಾರ್ ಲಿಂಕ್ ವ್ಯವಸ್ಥೆಯಿಂದ ವಾರ್ಷಿಕ ಆದಾಯ 1.2 ಲಕ್ಷ ರೂ.ದಾಟಿದರೆ ತಾನಾಗಿಯೇ ಬಿಪಿಎಲ್ ಪಡಿತರ ರದ್ದಾಗುತ್ತಿದ್ದು, ಅದಕ್ಕೆ ಶಾಸಕರು, ಸರಕಾರ ಕಾರಣವಲ್ಲ. ಈ ವಿಚಾರ ಅವರಿಗೂ ಗೊತ್ತಿದ್ದರೂ ವಿನಾ ಕಾರಣ ಆರೋಪ  ಮಾಡುತ್ತಿದ್ದಾರೆ. ರಾಜಧರ್ಮ ಕುರಿತು ಮಾತನಾಡುವ ಅವರು ಓಡಾಡುತ್ತಿರುವ ಕಾರು ಯಾರದ್ದು ಎಂದು ಪ್ರಶ್ನಿಸಿದರು. ಡೊಂಬಯ ಅರಳ, ರವೀಶ್ ಶೆಟ್ಟಿ ಕರ್ಕಳ, ರೊನಾಲ್ಡ್ ಡಿಸೋಜಾ, ವಜ್ರನಾಥ ಕಲ್ಲಡ್ಕ, ಸುದರ್ಶನ್ ಬಜ, ಪುರುಷೋತ್ತಮ ಶೆಟ್ಟಿ ವಾಮದಪದವು, ಗಣೇಶ್ ರೈ ಮಾಣಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ