ಬಂಟ್ವಾಳ

ಸಿಬಿಎಸ್ ಸಿ: ಬಿ.ಆರ್.ಎಂ.ಪಿ.ಗೆ ಶೇ.100 ಫಲಿತಾಂಶ

1 / 11

ಬಂಟ್ವಾಳ: ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ಸಿ.ಬಿ.ಎಸ್.ಇ ೨೦೨೦-೨೧ನೇ ಸಾಲಿನ ೧೦ನೇ ತರಗತಿ ಪರೀಕ್ಷೆಯಲ್ಲಿ ಸತತ 10ನೇ ಬಾರಿ ಶೇ.100 ಫಲಿತಾಂಶವನ್ನು ದಾಖಲಿಸಿದೆ. ತರಗತಿಯಲ್ಲಿರುವ 37 ವಿದ್ಯಾರ್ಥಿಗಳಲ್ಲಿ 22 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ನವ್ಯಾ.ಜಿ.ಎನ್ ಮತ್ತು ಬಿ.ಶ್ರೇಯಸ್ ಶೆಣೈ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ ಎಂದು ಪ್ರಿನ್ಸಿಪಾಲ್ ರಮಾ ಶಂಕರ್ ಸಿ ತಿಳಿಸಿದ್ದಾರೆ. ನವ್ಯಾ ಜಿ.ಎನ್, ಶ್ರೇಯಸ್ ಶೆಣೈ, ಮನಸ್ವಿನಿ ರಾವ್, ಆದ್ಯಾ ಬನ್ನಿಂತಾಯ, ಭಾವನಾ ಹೊಳ್ಳ, ಆದೀಶ್ ಇಂದ್ರ, ವರ್ಷಿಣಿ ಮಯ್ಯ, ಅದಿತಿ ಶೆಟ್ಟಿ, ವಿನಿತ್ ಮ್ಯಾಕ್ಸಿನ್ ಮೆನೆಜಸ್, ಬಿ.ನಿಧಿ ಬಾಳಿಗಾ ಮತ್ತು ಶಾರ್ವರಿ ರಾವ್ ಅತ್ಯುತ್ತಮ ಅಂಕ ಗಳಿಸಿದವರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ