ಬಂಟ್ವಾಳ

ಮಾಜಿ ಸಚಿವ ರೈ ನೇತೃತ್ವದಲ್ಲಿ ಕೊಳ್ನಾಡು ಜಿಪಂಗೊಳಪಟ್ಟ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಬಂಟ್ವಾಳ: ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕೊಳ್ನಾಡು ಜಿಲ್ಲಾ ಪಂಚಾಯತ್ ಒಳಪಟ್ಟ ಮಂಚಿ, ಸಾಲೆತ್ತೂರು, ಕೊಳ್ನಾಡು, ಕನ್ಯಾನ, ಕರೋಪಾಡಿ ಈ 5 ಗ್ರಾಮ ಪಂಚಾಯತಿನ ಸದಸ್ಯರು ವಲಯ ಕಾಂಗ್ರೆಸ್ ಅಧ್ಯಕ್ಷರು , ಬೂತ್ ಸಮಿತಿ ಅಧ್ಯಕ್ಷರು , ಬೂತ್ ಸಮಿತಿ ಕಾರ್ಯದರ್ಶಿ , ಬೂತ್ ಸಮಿತಿ ಬಿ ಎಲ್ ಎ , ಹಾಗೂ ಮುಂಚೂಣಿ ಘಟಕದ ಅಧ್ಯಕ್ಷರು , ಗ್ರಾಮ ಪಂಚಾಯತ್ ಸದಸ್ಯರು ,ಮುಖ್ಯ ಕಾರ್ಯಕರ್ತರ ಚುನಾವಣಾ ಪೂರ್ವ ತಯಾರಿ ಸಭೆ ಮಾಜಿ ಸಚಿವರಾದ ಬಿ ರಮಾನಾಥ ರೈ ನೇತೃತ್ವದಲ್ಲಿ ನಡೆಯಿತು .

 ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಎಲ್ಲರೂ ಒಗ್ಗಟ್ಟಿನಿಂದ ಚುನಾವಣೆಯನ್ನು ಎದುರಿಸಿದರೆ ಗೆಲುವು ಶತಸಿದ್ದ ಎಂದು ಈ ಸಂದರ್ಭ ರೈ ಹೇಳಿದರು .

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಕಾರ್ಯಕರ್ತರು ಪಕ್ಷವನ್ನು ಕಟ್ಟಿ ಬೆಳೆಸೋಣ ಎಂದು ಮನವಿ ಮಾಡಿದರು. ಈ ಸಂದರ್ಭ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಹಾಯ ಹಸ್ತದ ಉಸ್ತುವಾರಿಯಾದ ಅನಿತಾ ಹೇಮನಾಥ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್,  ಎಂ ಎಸ್ ಮೊಹಮ್ಮದ್, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಬೀರ್ ಸಿದ್ದಕಟ್ಟೆ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ , ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ, ಯುವ ಅಧ್ಯಕ್ಷರಾದ ಇಬ್ರಾಹಿಂ ನವಾಝ್,  ಸೋಮಶೇಖರ್ ಗೌಡ, ಹರ್ಷದ್ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ