ಬಂಟ್ವಾಳ

ಸರಪಾಡಿ ಸಮೀಪ ಅಪಘಾತದಲ್ಲಿ ಗಾಯಗೊಂಡವರಿಗೆ ಇಂದಿರಾ ಕ್ಷೇಮನಿಧಿಯಿಂದ ಆರ್ಥಿಕ ಸಹಾಯ: ಮಾಜಿ ಸಚಿವ ರೈ ನೇತೃತ್ವದಲ್ಲಿ ವಿತರಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಪಿರಿಯಾಪಾದೆಯಲ್ಲಿ ರಿಕ್ಷಾ ಅಪಘಾತದಿಂದ ಗಾಯಗೊಂಡ ಜಯಶ್ರೀ ಸುವರಿಸ್ ಅವರಿಗೆ ಬಂಟ್ವಾಳದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಷೇಮ ನಿಧಿಯಿಂದ ಆರ್ಥಿಕ ಸಹಾಯವನ್ನು ಮಾಜಿ ಸಚಿವರಾದ ಬಿ ರಮಾನಾಥ ರೈ ವಿತರಿಸಿದರು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್,ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್, ಜನಾರ್ದನ್ ಚಂಡ್ತಿಮಾರ್, ಪ್ರಶಾಂತ್ ಕುಲಾಲ್,ಶಬೀರ್ ಸಿದ್ದಕಟ್ಟೆ, ಸುಧಾಕರ್ ಶಣೈ, ಮನೋಹರ್ ಕುಲಾಲ್, ಅಮ್ಮಿ ಅರ್ಬಿಗುಡ್ಡೆ, ಇಸ್ಮಾಲ್ ಸರಪಾಡಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.