ಬಂಟ್ವಾಳ

ಮಾಣಿ ಗ್ರಾಮಸಭೆ: ಕೋವಿಡ್ ನಿರ್ವಹಣೆಗೆ ಮೆಚ್ಚುಗೆ ದೊರಕಿದೆ – ಅಧ್ಯಕ್ಷ ಬಾಲಕೃಷ್ಣ ಆಳ್ವ

ಬಂಟ್ವಾಳ: ಮಾಣಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ನಡೆದಿದ್ದು, ಈ ಸಂದರ್ಭ ಮಾತನಾಡಿದ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೋವಿಡ್ ನಿರ್ವಹಣೆ ಕುರಿತು ಪಂಚಾಯಿತಿ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.

ಜಿಲ್ಲೆಯಲ್ಲಿಯೇ ಗುರುತಿಸುವ ರೀತಿಯಲ್ಲಿ ಸಾವಿರದ ನೂರು ಡೋಸ್ ಗಳ ಕೋವಿಡ್ ಲಸಿಕಾ ಶಿಬಿರವನ್ನು ಗ್ರಾಮ ಪಂಚಾಯತ್ ವತಿಯಿಂದ ಬೆಂಗಳೂರಿನ ಪ್ರತಿಷ್ಠಿತ ಅಪೋಲೊ ಆಸ್ಪತ್ರೆಯ ಸಹಕಾರದೊಂದಿಗೆ ವಿವಿಧ ಸಂಘ  ಸಂಸ್ಥೆಗಳ ಸಹಭಾಗಿತ್ವದಲ್ಲಿ ನಡೆಸಲಾಗಿದೆ ಎಂದರು. ತೆರಿಗೆ ಸಂಗ್ರಹ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರುಗಳಾದ ಸುದೀಪ್ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ಇಬ್ರಾಹಿಂ.ಕೆ.ಮಾಣಿ ಹೇಳಿದರು. ಈ ಸಂದರ್ಭ ತೆರಿಗೆ ಪಾವತಿಸದಿರುವವರಿಗೆ ನೋಟಿಸ್ ನೀಡಲು ಸೂಚಿಸಲಾಯಿತು. ಸ್ವಾತಂತ್ರ್ಯೋತ್ಸವ ದಿನದಂದು ನೀರಿನ ಶುಲ್ಕ ಸಂಗ್ರಹಕ್ಕೆ ತಂತ್ರಾಂಶವನ್ನು ಜಾರಿಗೊಳಿಸಲಾಗುವುದು. ಆ ಮೂಲಕ ನೂರು ಶೇಕಡ ತೆರಿಗೆ ಸಂಗ್ರಹದ ಗುರಿ ಹೊಂದಲಾಗಿದೆ ಎಂದು ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಹೇಳಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ನಾರಾಯಣ ಶೆಟ್ಟಿ ತೋಟ, ರಮಣಿ.ಡಿ.ಪೂಜಾರಿ, ಸೀತಾ, ಸುಜಾತ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿ ಇಲಾಖೆ ಮತ್ತು ಸಾರ್ವಜನಿಕ ಅರ್ಜಿಗಳನ್ನು ಸಭೆಯಲ್ಲಿ ಮಂಡಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ