ಬಂಟ್ವಾಳ

ಬಂಟ್ವಾಳ: ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ಅಣ್ಣನಿಂದಲೇ ತಮ್ಮನ ಹತ್ಯೆ

ಸಹೋದರರ ಜಗಳ ಕೊಲೆಯಲ್ಲಿ ಅಂತ್ಯವಾಯ್ತು

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ಸುಂದರ (30) ಎಂಬಾತನನ್ನು ಶುಕ್ರವಾರ ಮಧ್ಯರಾತ್ರಿ ಆತನ ಅಣ್ಣ ರವಿ ಎಂಬಾತ ಹತ್ಯೆ ಮಾಡಿದ ಘಟನೆ ನಡೆದಿದ್ದು, ಸದ್ಯ ಆರೋಪಿ ತಪ್ಪಿಸಿಕೊಂಡಿದ್ದಾನೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವೈಯಕ್ತಿಕ ಕಾರಣಗಳಿಂದ ಹತ್ಯೆ ನಡೆದಿರುವುದಾಗಿ ಸಂಶಯಿಸಲಾಗಿದೆ.

ಅವಿವಾಹಿತನಾಗಿದ್ದ ಸುಂದರ ಎಂಬಾತ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದು, ಈತನ ಅಣ್ಣ ರವಿ ಮತ್ತು ಸುಂದರ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಶುಕ್ರವಾರ ಮನೆಯಲ್ಲಿ ತಾಯಿಯ ವರ್ಷಾಂತಿಕ ಇದ್ದು ರಾತ್ರಿ ಊಟ ಮಾಡಿ ಮನೆಯಲ್ಲಿರುವ ಸಮಯ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆಯೇ ಜಗಳ ಮಾಡಿಕೊಂಡಿದ್ದು, ರಾತ್ರಿ 11.30 ಗಂಟೆಯ ಸಮಯಕ್ಕೆ ಹತ್ಯೆ ನಡೆದಿದೆ. ರವಿಯು ಸುಂದರನಿಗೆ ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಏಟು ನೀಡಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಮೃತಪಟ್ಟದ್ದನ್ನು ನೋಡಿ ಸಲಾಕೆಯನ್ನು ಬಿಸಾಡಿ ಓಡಿ ಹೋಗಿದ್ದಾಗಿ ದೂರಿನಲ್ಲಿ ತಿಳಿಸಲಾಗಿದ್ದು, ಈ ಕುರಿತು  ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.