ಬಂಟ್ವಾಳ

ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗ ರೈತ, ಕಾರ್ಮಿಕರಿಂದ ಪ್ರತಿಭಟನೆ

ಬಂಟ್ವಾಳ: ಕಾರ್ಪೊರೆಟ್ ಕಂಪನಿಗಳು ಭಾರತ ಬಿಟ್ಟು ತೊಲಗಬೇಕು ಎಂದು ಒತ್ತಾಯಿಸಿ ದೇಶವ್ಯಾಪಿ ಪ್ರತಿಭಟನೆಯ ಭಾಗವಾಗಿ ರೈತ, ಕಾರ್ಮಿಕರಿಂದ ಪ್ರತಿಭಟನೆ ಬಂಟ್ವಾಳ ಮಿನಿ ವಿಧಾನಸೌಧ ಮುಂಭಾಗ ನಡೆಯಿತು. ಸಿಐಟಿಯು ಜಿಲ್ಲಾಧ್ಯಕ್ಷ ಜೆ. ಬಾಲಕೃಷ್ಣ ಶೆಟ್ಟಿ ಮಾತನಾಡಿ ಮತ್ತೆ ಕಾರ್ಪೋರೇಟ್ ಕಂಪೆನಿಗಳು ಭಾರತದಲ್ಲಿ ನೆಲೆಯೂರಿ ದೇಶದ ಸಂಪತ್ತನ್ನು ಕೊಳ್ಳೆಹೊಡೆಯುತ್ತಿದೆ ಎಂದು ಆರೋಪಿಸಿದರೆ, ಸಿಐಟಿಯು  ಜಿಲ್ಲಾ ಕಾರ್‍ಯದರ್ಶಿ ರಾಮಣ್ಣ ವಿಟ್ಲ ಮಾತನಾಡಿ ದುಡಿಯುವ ವರ್ಗಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಂಚಿಸುತ್ತಿವೆ, ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಮಾಲಕರ ಹಿತ ಕಾಯುತ್ತಿದೆ ಎಂದು ಆರೋಪಿಸಿದರು. ಮುಖಂಡರಾದ ಉದಯಕುಮಾರ್ ಬಂಟ್ವಾಳ , ವಿನಯನಡುಮೊಗರು, ಸೇವಂತಿ, ದೇಜಪ್ಪ ಪೂಜಾರಿ, ಲಿಯಾಕತ್ ಖಾನ್ , ಅಪ್ಪು ನಾಯ್ಕ ನಾರಾಯಣ ಕೊಲೋಡಿ, ಈಶ್ವರ , ದಾಮೋದರ ಪರಕಜೆ ಮೊದಲಾದವರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.