ಬಂಟ್ವಾಳ

ಪ್ರಕೃತಿಯತ್ತ ಮುಖ ಮಾಡಲು ಆಟಿ ಆಚರಣೆ ಪ್ರೇರಣೆಯಾಗಲಿ: ಗೋಪಾಲ ಅಂಚನ್

ಬಂಟ್ವಾಳ: ಮನುಷ್ಯ ಪ್ರಕೃತಿಗೆ ವಿರುದ್ಧವಾಗಿ ನಡೆಯುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಮತ್ತೆ ಪ್ರಕೃತಿಯತ್ತ ಮುಖ ಮಾಡಲು ಆಟಿಯ ಆಚಾರಗಳು ಪ್ರೇರಣೆಯಾಗಲಿ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಗೋಪಾಲ ಅಂಚನ್ ಹೇಳಿದರು.

 ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಲ್ ವತಿಯಿಂದ ನಡೆದ ಸರಳ ಸಮಾರಂಭದಲ್ಲಿ ಆಟಿಯ ಆಚಾರಗಳ ಮಹತ್ವ ವಿಷಯದಲ್ಲಿ ಉಪನ್ಯಾಸ ನೀಡಿದರು. ಹಿಂದಿನ ಕಾಲದಲ್ಲಿ ನಮ್ಮ  ಹಿರಿಯರು ಅಷಾಡ ಮಾಸದಲ್ಲಿಕಾಲದ ಅನಿವಾರ್ಯತೆಗೆ ಮೈಯೊಡ್ಡಿ ಪ್ರಕೃತಿ ಸಹಜವಾದ ಬದುಕನ್ನು ನಡೆಸಿರುವುದೇ ಇಂದು ಆಟಿಯ ಆಚರಣೆಗಳಾಗಿ ಮಹತ್ವ ಪಡೆದಿದೆ. ಇಂತಹ ಆಚರಣೆಗಳು ಇಂದಿನ ಜನಾಂಗಕ್ಕೆ ಹಿಂದಿನ ಕಾಲದ ಬದುಕಿನ ಚಿತ್ರಣವನ್ನು ಕಟ್ಟಿಕೊಡಬೇಕು. ಪಾಸ್ಟ್ ಹಾಗೂ ಟೇಸ್ಟ್ ಫುಡ್ ಸಂಸ್ಕ್ರತಿಯಿಂದ ಹೊರಬಂದು ನಿಸರ್ಗದತ್ತವಾದ ಆಹಾರಕ್ರಮಕ್ಕೆ ಒಗ್ಗಿಕೊಳ್ಳಲು ಪ್ರೇರಣೆ ನೀಡಬೇಕು ಎಂದು ಅವರು ಹೇಳಿದರು.

ರೋಟರಿ ಕ್ಲಬ್ ಲೊರೆಟ್ಟೊ ಹಿಲ್ಸ್ ಅಧ್ಯಕ್ಷ ರಾಘವೇಂದ್ರ ಭಟ್ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕಾಧ್ಯಕ್ಷ ಅವಿಲ್ ಮೆನೆಜಸ್ ಉಪಸ್ಥಿತರಿದ್ದರು. ಕಾರ್ಯದರ್ಶಿ ರಮೇಶ ನಾಯಕ್ ರಾಯಿ ಸ್ವಾಗತಿಸಿ, ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ