ಸಂಗೀತ

ಯುವಶಕ್ತಿ ಕಡೇಶಿವಾಲಯ ನಿರ್ಮಾಣದಲ್ಲಿ ದೇಶಭಕ್ತಿಗೀತೆ ಜಯತು ಜನ್ಮಭೂಮಿ ಬಿಡುಗಡೆ

ಸಾಮಾಜಿಕ. ಸಾಂಸ್ಕೃತಿಕ. ಧಾರ್ಮಿಕ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಯುವಶಕ್ತಿ ಕಡೇಶಿವಾಲಯ (ರಿ) ನಿರ್ಮಾಣದಲ್ಲಿ ದೇಶಭಕ್ತಿ ಗೀತೆ ಜಯತು ಜನ್ಮಭೂಮಿ ಯುವಶಕ್ತಿ ಕಡೇಶಿವಾಲಯ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡಿದೆ. ಶೆಟ್ಟಿ ಅಜಯ್ ರಾಜ್ ಸಾಹಿತ್ಯದಲ್ಲಿ ಸಂತೋಷ್ ಬೇಂಕ್ಯ ಗಾಯನದಲ್ಲಿ ಮೂಡಿಬಂದ ಹಾಡಿಗೆ ಅಶ್ವಿನ್ ಪುತ್ತೂರು ಸಂಗೀತ ನೀಡಿದ್ದಾರೆ.

ಭಾನುವಾರ ಕಡೇಶಿವಾಲಯ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸುನಿಲ್ ಕುಮಾರ್ ಹಾಡಿಗೆ ಅಧಿಕೃತ ಚಾಲನೆ ನೀಡಿದರು. ಅತ್ತುತ್ತಮ ಶಿಕ್ಷಕ ಪುರಸ್ಕೃತ. ಯುವಶಕ್ತಿಗಳ ಸ್ಪೂರ್ತಿ ಭಾಸ್ಕರ್ ನಾಯ್ಕ್ ಪುಣಚ ಶುಭಹಾರೈಸಿದರು. ಪಂಚಾಯತ್ ಅಧಕ್ಷರಾದ ಸುರೇಶ್ ಬನಾರಿ, ಅರ್ಚಕರಾದ ದಿನೇಶ್ ಭಟ್, ಸಂಘಟನಾ ಪ್ರಮುಖರು, ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.

ಈ ಕೆಳಗಿನ ಲಿಂಕ್ ತೆರೆದು ಈ ದೇಶಭಕ್ತಿ ಗೀತೆಯನ್ನು ಕೇಳಿ ನೋಡಿ ಆನಂದಿಸಬಹುದು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts