ಬಂಟ್ವಾಳ

21 ಗ್ರಾಮ ತಲುಪಿದ ಕೆಎಸ್ಸಾರ್ಟಿಸಿ ಸಾರಿಗೆ ಸುರಕ್ಷಾ ಬಸ್: 1303 ಮಂದಿ ತಪಾಸಣೆ

ಬಸ್ಸಿನಲ್ಲಿ ಇಸಿಜಿ ತಪಾಸಣೆಗೆ ವ್ಯವಸ್ಥೆ – ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಪ್ರಯತ್ನದ ಮೂಲಕ ಬಂಟ್ವಾಳಕ್ಕೆ ಆಗಮಿಸಿದ ಕೆಎಸ್‌ಆರ್‌ಟಿಸಿ ಸಾರಿಗೆ ಸುರಕ್ಷಾ ಐಸಿಯು ಬಸ್ಸು ಈ ತನಕ ಬಂಟ್ವಾಳದ 21 ಗ್ರಾ.ಪಂ.ಗಳನ್ನು ತಲುಪಿದ್ದು, ಒಟ್ಟು 1303 ಮಂದಿ ಆರೋಗ್ಯ ತಪಾಸಣೆ ಮಾಡಿದ್ದಾರೆ. ಸೋಮವಾರ ಬಂಟ್ವಾಳ ಕ್ಷೇತ್ರದ ಸರಪಾಡಿ ಪಂಚಾಯಿತಿಗೆ ಬಸ್ ತಲುಪಿದ್ದು, ಈ ಸಂದರ್ಭ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಜನರು ದೂರದ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಲು ಸಾಧ್ಯವಿಲ್ಲದ ವೇಳೆ ಬಸ್ ಉಪಯೋಗಕ್ಕೆ ದೊರಕುತ್ತಿದ್ದು, ಜನರ  ಬೇಡಿಕೆಯಂತೆ ಇಸಿಜಿ ವ್ಯವಸ್ಥೆಯನ್ನು ಇದರಲ್ಲಿ ಕಲ್ಪಿಸಲಾಗುವುದು. ಈಗಾಗಲೇ ಬಸ್ ನಲ್ಲಿ ನುರಿತ ವೈದ್ಯಕೀಯ ಸಿಬ್ಬಂದಿ ಕಾರ್ಯಾಚರಿಸುತ್ತಿದ್ದು, ಸಕಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಜನರು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದು, ಪೂರ್ಣ ಪ್ರಮಾಣದ ಆಸ್ಪತ್ರೆ ರೀತಿಯಲ್ಲಿ ಕಾರ್ಯಚಟುವಟಿಕೆ ನಡೆಸುತ್ತಿದೆ ಎಂದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.