ಎಚ್.ಯು.ಐ.ಡಿ. ವಿರೋಧಿಸಿ ಬಂಟ್ವಾಳದಲ್ಲಿ ಆಭರಣ ವರ್ತಕರ ಪ್ರತಿಭಟನೆ

ಬಂಟ್ವಾಳ: ಹಾಲ್ ಮಾರ್ಕ್ ಗೆ ನಮಗೆ ಸ್ವಾಗತ ಆದರೆ ಎಚ್.ಯು.ಐ.ಡಿ. ನಮಗೆ ಬೇಡ ಎಂದು ಆಗ್ರಹಿಸಿ, ರಾಷ್ಟ್ರದಾದ್ಯಂತ ನಡೆಯುತ್ತಿರುವ ಆಭರಣ ವರ್ತಕರ ಪ್ರತಿಭಟನೆಯ ಅಂಗವಾಗಿ ಬಂಟ್ವಾಳದ ಜ್ಯುವೆಲರಿಗಳ ಮಾಲೀಕರು ಮತ್ತು ಸಿಬ್ಬಂದಿ ಅಸೋಸಿಯೇಶನ್ ಪದಾಧಿಕಾರಿಗಳೊಂದಿಗೆ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಬಂಟ್ವಾಳ ಜ್ಯುವೆಲರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಬಿ.ಸುರೇಶ್ ದಾಮೋದರ್ ಬಾಳಿಗಾ, ಆಭರಣದ ಮೇಲೆ ಎಚ್,ಯು.ಐ.ಡಿ. ಕಡ್ಡಾಯವಾಗಿ  ಅಳವಡಿಸುವ ಕಾಯ್ದೆಯ ವಿರುದ್ದ ಎಲ್ಲಾ ಜ್ಯುವೆಲರ್ಸ್ ಮಾಲೀಕರು ಸೇರಿದ್ದೇವೆ. ಕೋವಿಡ್ ನ ಈ ಸಮಯದಲ್ಲಿ ಈ ಕಾಯ್ದೆಯಿಂದ ಸಾಕಷ್ಟು ತೊಂದರೆಗಳಾಗುತ್ತದೆ ಎಂದು ಹೇಳಿದರು. ಬಳಿಕ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರಿಗೂ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜೊತೆ ಕಾರ್ಯದರ್ಶಿ ಸುನಿಲ್ ಬಿ, ವಿಶ್ವನಾಥ ಬಂಟ್ವಾಳ್, ಯುವರಾಜ ಆಚಾರ್ಯ, ಸತೀಶ ಭಂಡಾರಿ, ಹನೀಫ್, ಶಿವಾಜಿ ಜಾಧವ್, ಯೋಗೀಶ್ ನಾಯಕ್ ಸಹಿತ ಬಂಟ್ವಾಳದ ಎಲ್ಲ ಆಭರಣದಂಗಡಿಗಳ ವರ್ತಕರು, ಅಸೋಶಿಯೇಶನ್ ಪದಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಸುನಿಲ್ ಬಿ. ಸ್ವಾಗತಿಸಿದರು. ಗಿರೀಶ್ ಪೈ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಎಚ್.ಯು.ಐ.ಡಿ. ವಿರೋಧಿಸಿ ಬಂಟ್ವಾಳದಲ್ಲಿ ಆಭರಣ ವರ್ತಕರ ಪ್ರತಿಭಟನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*