ಬಂಟ್ವಾಳ

ಎಚ್.ಯು.ಐ.ಡಿ. ವಿರೋಧಿಸಿ ಬಂಟ್ವಾಳದಲ್ಲಿ ಆಭರಣ ವರ್ತಕರ ಪ್ರತಿಭಟನೆ

ಬಂಟ್ವಾಳ: ಹಾಲ್ ಮಾರ್ಕ್ ಗೆ ನಮಗೆ ಸ್ವಾಗತ ಆದರೆ ಎಚ್.ಯು.ಐ.ಡಿ. ನಮಗೆ ಬೇಡ ಎಂದು ಆಗ್ರಹಿಸಿ, ರಾಷ್ಟ್ರದಾದ್ಯಂತ ನಡೆಯುತ್ತಿರುವ ಆಭರಣ ವರ್ತಕರ ಪ್ರತಿಭಟನೆಯ ಅಂಗವಾಗಿ ಬಂಟ್ವಾಳದ ಜ್ಯುವೆಲರಿಗಳ ಮಾಲೀಕರು ಮತ್ತು ಸಿಬ್ಬಂದಿ ಅಸೋಸಿಯೇಶನ್ ಪದಾಧಿಕಾರಿಗಳೊಂದಿಗೆ ಬಿ.ಸಿ.ರೋಡಿನ ಮಿನಿ ವಿಧಾನಸೌಧದ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಬಂಟ್ವಾಳ ಜ್ಯುವೆಲರ್ಸ್ ಅಸೋಸಿಯೇಶನ್ ಕಾರ್ಯದರ್ಶಿ ಬಿ.ಸುರೇಶ್ ದಾಮೋದರ್ ಬಾಳಿಗಾ, ಆಭರಣದ ಮೇಲೆ ಎಚ್,ಯು.ಐ.ಡಿ. ಕಡ್ಡಾಯವಾಗಿ  ಅಳವಡಿಸುವ ಕಾಯ್ದೆಯ ವಿರುದ್ದ ಎಲ್ಲಾ ಜ್ಯುವೆಲರ್ಸ್ ಮಾಲೀಕರು ಸೇರಿದ್ದೇವೆ. ಕೋವಿಡ್ ನ ಈ ಸಮಯದಲ್ಲಿ ಈ ಕಾಯ್ದೆಯಿಂದ ಸಾಕಷ್ಟು ತೊಂದರೆಗಳಾಗುತ್ತದೆ ಎಂದು ಹೇಳಿದರು. ಬಳಿಕ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಮನವಿ ಸಲ್ಲಿಸಲಾಯಿತು. ಇದೇ ವೇಳೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರಿಗೂ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜೊತೆ ಕಾರ್ಯದರ್ಶಿ ಸುನಿಲ್ ಬಿ, ವಿಶ್ವನಾಥ ಬಂಟ್ವಾಳ್, ಯುವರಾಜ ಆಚಾರ್ಯ, ಸತೀಶ ಭಂಡಾರಿ, ಹನೀಫ್, ಶಿವಾಜಿ ಜಾಧವ್, ಯೋಗೀಶ್ ನಾಯಕ್ ಸಹಿತ ಬಂಟ್ವಾಳದ ಎಲ್ಲ ಆಭರಣದಂಗಡಿಗಳ ವರ್ತಕರು, ಅಸೋಶಿಯೇಶನ್ ಪದಾಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು. ಜೊತೆ ಕಾರ್ಯದರ್ಶಿ ಸುನಿಲ್ ಬಿ. ಸ್ವಾಗತಿಸಿದರು. ಗಿರೀಶ್ ಪೈ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.