ಬಂಟ್ವಾಳ

ರೈತರ ಜಮೀನಿನಲ್ಲಿ ಸರ್ವೆ ಮಾಡಿದರೆ ಪ್ರತಿಭಟನೆ: ರೈತಸಂಘ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಫೆರ್ನಾಂಡಿಸ್

ರೈತರ ಜಮೀನುಗಳಿಗೆ ಅಕ್ರಮವಾಗಿ ನುಗ್ಗಿ ಸರ್ವೇಗೆ ಮುಂದಾಗುತ್ತಿರುವ ವ್ಯಕ್ತಿಗಳನ್ನು ನಿರ್ದಾಕ್ಷಿಣ್ಯವಾಗಿ ತಡೆಯಬೇಕು.  ಸೂಕ್ತ ಮಾಹಿತಿ ಇಲ್ಲದೆ ಖಾಸಗಿ ಜಮೀನಿಗೆ ನುಗ್ಗಿದರೆ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಸಂಘದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಓಸ್ವಾಲ್ಡ್ ಫರ್ನಾಂಡಿಸ್ ಹೇಳಿದರು.

ಸೊರ್ನಾಡು ಮಿಲ್ಕ್ ಡೈರಿ ಸಭಾಂಗಣದಲ್ಲಿ ಬಂಟ್ವಾಳ ಭಾಗದಲ್ಲಿ ೪೦೦ಕೆ ವಿ ಉಡುಪಿ ಕಾಸರಗೋಡು ವಿದ್ಯುತ್ ಪ್ರಸರಣ ಮಾರ್ಗದಿಂದ ಜಮೀನು ಕಳೆದುಕೊಳ್ಳುವ ಸಂತ್ರಸ್ತ ರೈತರ ಸಭೆಯಲ್ಲಿ ಮಾತನಾಡಿದರು.

ಈಗಾಗಲೇ ಖಾಸಗೀ ಜಮೀನುಗಳಿಗೆ ಯಾರಿಗೂ ಪ್ರವೇಶವಿಲ್ಲ ಎಂದು ಎಚ್ಚರಿಕೆ ನೀಡಿದರೂ ರೈತರು ತೋಟದಲ್ಲಿ ಇಲ್ಲದ ಸಮಯ ತೋಟಗಳಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಕಾರಿಗಳು ಸ್ಥಳಕ್ಕೆ ಬಂದು ಮಾಹಿತಿ ನೀಡುವ ತನಕ ಯಾರೇ ಬಂದರೂ ಅವರನ್ನು ಓಡಿಸುವ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು. ಎಲ್ಲಾ ಪಂಚಾಯಿತಿಗಳಿಗೆ ನಿರಪೇಕ್ಷಣ ಪತ್ರ ನೀಡದಂತೆ ರೈತರಿಂದ ಪತ್ರ ನೀಡುವುದು, ಜಿಲ್ಲಾ ದಂಡಾಕಾರಿಗಳಿಗೆ ಹಾಗೂ ಮುಖ್ಯಮಂತ್ರಿಗಳಿಗೆ ಯೋಜನೆ ಕೈಬಿಡುವಂತೆ ರೈತರು ವೈಯಕ್ತಿಕವಾಗಿ ಪತ್ರ ಬರೆಯುವ ಬಗ್ಗೆ ನಿರ್ಣಯಕೈಗೊಳ್ಳಲಾಯಿತು.ಈ ಸಭೆಯಲ್ಲಿ ರೈತ ಹೋರಾಟ ಸಮಿತಿಯ ಸಂಯೋಜಕರಾದ ಕೊನ್ಸೆಪ್ಟ ಡೆಸಾ ಮುಂದಿನ ಹೋರಾಟದ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಅರಳ, ಪಂಜಿಕಲ್ಲು, ಬಿ ಮೂಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಸಂತ್ರಸ್ತ ರೈತರು ಉಪಸ್ಥಿತರಿದ್ದರು ರೈತ ಹೋರಾಟ ಸಮಿತಿಯ ಅಧ್ಯಕ್ಷರಾದ ರೊಯ್ ಕಾರ್ಲೊ ಸ್ವಾಗತಿಸಿದರು.ಕಾರ್ಯದರ್ಶಿ ಬೆನೆಡಿಕ್ಟ ಕಾರ್ಲೊ ವಂದಿಸಿದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ