ಬಂಟ್ವಾಳ

ಸರಪಾಡಿಯಲ್ಲಿ ಜೇನು ಸಾಕಾಣಿಕಾ ತರಬೇತಿ ಶಿಬಿರ

ಬಂಟ್ವಾಳ: ಕೃಷಿ ಉತ್ಪಾದನೆ ಹೆಚ್ಚು ಮಾಡಲು, ಸ್ವಂತ ಉದ್ಯೋಗ ಮತ್ತು ಆದಾಯದ ದಾರಿ ಕಂಡುಕೊಳ್ಳಲು ರೈತರಿಗೆ ಜೇನು ಕೃಷಿ ಹೆಚ್ಚು ಪ್ರಯೋಜನ ಎಂದು ಮಣಿನಾಲ್ಕೂರು ಸೇವಾ ಸಹಕಾರಿ ಸಂಘ ಸರಪಾಡಿ ಅಧ್ಯಕ್ಷ ರಾಧಾಕೃಷ್ಣ ಮಯ್ಯ ಹೇಳಿದರು.

ಸರಪಾಡಿ ದಿ| ಎನ್. ಸುಬ್ಬಣ್ಣ ಶೆಟ್ಟಿ ಸಭಾಂಗಣದಲ್ಲಿ ಸೋಮವಾರ ನಡೆದ ಜೇನು ಸಾಕಾಣಿಕೆ ತರಬೇತಿ ಉದ್ಘಾಟಿಸಿ ಮಾತನಾಡಿದರು. ತೆಂಗು ಉತ್ಪಾದಕರ ಸೌಹಾರ್ದ ಸಹಕಾರಿ ನೀ.ಬಿ. ಸಿ. ರೋಡ್, ತೋಟಗಾರಿಕೆ ಇಲಾಖೆ ಬಂಟ್ವಾಳ ಆಶ್ರಯದಲ್ಲಿ ಕಾರ್ಯಕ್ರಮ ನಡೆದಿತ್ತು. ತೆಂಗು ಸೌಹಾರ್ದ ಸಹಕಾರಿ ಅಧ್ಯಕ್ಷ ರಾಜಾ ಬಂಟ್ವಾಳ್ ಸಭಾಧ್ಯಕ್ಷತೆ ವಹಿಸಿದ್ದರು. ಜೇನು ಕೃಷಿ, ಅದರ ಪ್ರಯೋಜನ, ಸಹಾಯಧನ ಬಗ್ಗೆ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜಾ ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿ ರಾಧಾಕೃಷ್ಣ  ಬೆಟ್ಟಂಪ್ಪಾಡಿ ಜೇನು ಸಾಕಾಣಿಕೆ ಮಾಹಿತಿ ನೀಡಿದರು.

ಇದೇ ಸಂದರ್ಭ, ಕೃಷಿ ಇಲಾಖೆಯ ವತಿಯಿಂದ ಬೆಳೆ ಸಮೀಕ್ಷೆ ತರಬೇತಿ ಕಾರ್ಯಕ್ರಮ ನಡೆದಿದ್ದು, ಕೃಷಿ ಇಲಾಖೆಯ ತಾಂತ್ರಿಕ ಕೃಷಿ ಅಧಿಕಾರಿ ನಂದನ್ ಶೆಣೈ ಮಾಹಿತಿ ನೀಡಿದರು.ಮಣಿನಾಲ್ಕೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ನಾಗವೇಣಿ, ಮಣಿನಾಲ್ಕೂರು ಸಹಕಾರಿ ಸಂಘದ ಉಪಾಧ್ಯಕ್ಷ ವಿಶ್ವನಾಥ್ ನಾಯ್ಕ ಮತ್ತು ನಿರ್ದೇಶಕರಾದ ದಯಾನಂದ ಶೆಟ್ಟಿ ಮುನ್ನಲಾಯಿ, ತಿಲಕ್ ಬಂಗೇರ, ಜೋಕಿಂ ಪಿಂಟೋ, ವಿಶ್ವನಾಥ ಪೂಜಾರಿ, ನಾನಿಯಪ್ಪ ಪೂಜಾರಿ, ಗಿರಿದರ ಎಸ್. ಸೌಹಾರ್ದ ಸಹಕಾರಿ ನಿರ್ದೇಶಕ ಸದಾಶಿವ ಬಂಗುಳೆ ಉಪಸ್ಥಿತರಿದ್ದರು. ಮಣಿನಾಲ್ಕೂರು ಸಹಕಾರಿ ಸಂಘದ ನಿರ್ದೇಶಕ ಧನಂಜಯ ಶೆಟ್ಟಿ ಸ್ವಾಗತಿಸಿ, ಮುಖ್ಯ ಕಾರ್ಯನಿರ್ವಾಹಕ ಎಚ್. ಸುಧಾಕರ ಶೆಟ್ಟಿ ವಂದಿಸಿದರು. ತೆಂಗು ಸೌಹಾರ್ದ ಸಹಕಾರಿ ಮುಖ್ಯ ಕಾರ್ಯನಿರ್ವಾಹಕ ಹರ್ಷಿತ್ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ