ಬಂಟ್ವಾಳ

ಜನವಿರೋಧಿ ನೀತಿಗಳ ವಿರುದ್ಧ ಹೋರಾಟ: ಮಹಿಳಾ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಭವ್ಯಾ ನರಸಿಂಹಮೂರ್ತಿ

ವಿಭಜನೆ ನೀತಿಯನ್ನು ಬಿಜೆಪಿ ಅನುಸರಿಸುತ್ತಿದ್ದು, ಇದರ ವಿರುದ್ಧ ಹೋರಾಟಕ್ಕೆ ಸಿದ್ಧರಾಗಬೇಕಿದೆ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕಿ ಭವ್ಯಾ ನರಸಿಂಹಮೂರ್ತಿ ಹೇಳಿದ್ದಾರೆ. ಬಂಟ್ಚಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಬಿ.ಸಿ.ರೋಡಿನಲ್ಲಿ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಮಂಗಳವಾರ ನಡೆದ ಮಹಿಳಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ಮಾತನಾಡಿದರು.

ಒಂದು ತಿಂಗಳಲ್ಲೇ ಒಂದು ಕೋಟಿ ಮಂದಿ ಕೆಲಸ ಕಳೆದುಕೊಳ್ಳುತ್ತಿದ್ದಾರೆ. ಓಟು ಪಡೆಯಲು ದೇಶವನ್ನು ವಿಭಜಿಸುತ್ತಿರುವ ಕೇಂದ್ರ ಸರ್ಕಾರ, ಕಾಂಗ್ರೆಸ್ ತಂದ ಯೋಜನೆಗಳ ಮರುನಾಮಕರಣ ಮಾಡುತ್ತಿದ್ದಾರೆ. ಕೊರೋನಾ ದಿಂದಾಗಿ ದೇಶ ಶೋಕದಲ್ಲಿದೆ..  ಅತ್ಯಾಚಾರ, ಅನಾಚಾರ ಹೆಚ್ಚಾಗಿದೆ,  ಪ್ರತಿಭಟನೆಯ ಹೆಸರಿನಲ್ಲಿ‌ ಸಾವು. ನೋವುಗಳಾಗಿವೆ. ಹೊಸತನವನ್ನು‌ ರಾಜಕೀಯಕ್ಕೆ ನೀಡುವಂತಾಗಲು ಹೊಸ ಕ್ರಾಂತಿಯ ಅಗತ್ಯವಿದೆ ಎಂದವರು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕೆಪಿಸಿಸಿ ಬಂಟ್ಚಾಳ ಉಸ್ತುವಾರಿ ಸವಿತಾ ರಮೇಶ್ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ದುಡಿಯುವ ಮಹಿಳೆಯರನ್ನು ಕಾಂಗ್ರೆಸ್ ವಾಹಿನಿಯಲ್ಲಿ ತೊಡಗಿಸಿಕೊಳ್ಳುವಂತೆ ಹೇಳಿದರು. ಲೆಟರ್ ಹೆಡ್ ಬಳಸಿ ಆಗುವುದಕ್ಕಿಂತ ನಿರಂತರ ಪಕ್ಷದೊಂದಿಗಿದ್ದು ಗೆಲುವಿಗೆ ಶ್ರಮಿಸಿದರೆ ಮಹಿಳೆಯರು ಮುಂಚೂಣಿಯಲ್ಲಿರಲು ಸಾಧ್ಯ ಎಂದರು. ಮಾಜಿ ಸಚಿವ ಬಿ.ರಮಾನಾಥ ರೈ ಶುಭ ಹಾರೈಸಿದರು. ಮಾಜಿ ಸಚಿವ ಬಿ.ರಮಾನಾಥ ರೈ , ಜಿಲ್ಲಾ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಶಾಲೆಟ್ ಪಿಂಟೋ,  ಕೆಪಿಸಿಸಿ ಸದಸ್ಯರಾದ ಮಮತಾಗಟ್ಟಿ, ವೀಣಾ ಭಟ್, ಬಂಟ್ವಾಳ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ , ಜಿ.ಪಂ. ಮಾಜಿ ಸದಸ್ಯರಾದ ಎಂ.ಎಸ್.ಮಹಮ್ಮದ್,  ಚಂದ್ತಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 11 ಮಂದಿ ಹಿರಿಯ ಮಹಿಳಾ ಕಾಂಗ್ರೇಸ್ ಕಾರ್ಯಕರ್ತರನನ್ನು ಸನ್ಮಾನಿಸಲಾಯಿತು.  ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೇಸ್  ಸಮಿತಿ ಅಧ್ಯಕ್ಷೆ ಜಯಂತಿ ಪೂಜಾರಿ ಸ್ವಾಗತಿಸಿದರು.  ಬಂಟ್ವಾಳ‌ ಮಹಿಳಾ ಕಾಂಗ್ರೇಸ್ ಸಮಿತಿ ಅಧ್ಯಕ್ಷೆ ವಿಲ್ಮಾ ಮೊರಾಸ್ ವಂದಿಸಿದರು. ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.