ಬಂಟ್ವಾಳ

ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

ಬಂಟ್ವಾಳ: ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಬ್ರಹ್ಮರಕೂಟ್ಲು ಹಾಗೂ ಕಳ್ಳಿಗೆ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯಲ್ಲಿ ನಡೆಯಿತು.
ಮಾಜಿ ಸಚಿವ, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡಿದರು. ಶಾಲಾ ದತ್ತು ಸ್ವೀಕಾರ ಸಮಿತಿ ಸಂಚಾಲಕ, ಜಿ.ಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಕಳ್ಳಿಗೆ ಗ್ರಾಮಾಭಿವ್ರದ್ದಿ ಸಂಘದ ಅಧ್ಯಕ್ಷ ದಿವಾಕರ ಪಂಬದಬೆಟ್ಟು, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ದತ್ತು ಸಮಿತಿ ಸದಸ್ಯ ಮಧುಸೂದನ್ ಶೆಣೈ, ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೋಷನ್ ರೈ, ಗ್ರಾ.ಪಂ.ಸದಸ್ಯ ರವಿರಾಜ್ ಜೈನ್, ಮನೋಜ್ ಕನಪಾಡಿ, ಹಳೆ ವಿದ್ಯಾರ್ಥಿ ಶಶಿಧರ ಬ್ರಹ್ಮರಕೂಟ್ಲು, ವೆಂಕಪ್ಪ ಪೂಜಾರಿ, ಎಸ್‌ಡಿಎಂಸಿ ಅಧ್ಯಕ್ಷೆ ಶ್ರೀಕಲಾ, ಹಿರಿಯರಾದ ನೋಣಯ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಪ್ಲೋರಿನ್ ರೆಬೆಲ್ಲೊ ಸ್ವಾಗತಿಸಿದರು, ಪ್ರೀತಿ ಪ್ಲೇವಿ ಫೆರ್ನಾಂಡೀಸ್ ವಂದಿಸಿದರು. ಮಂಜುಳಾ ಡಿ. ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ