ಬಂಟ್ವಾಳ

ಬಂಟ್ವಾಳದಲ್ಲಿ ಪ್ರಥಮ ಚಿಕಿತ್ಸೆ ಕುರಿತ ಕಾರ್ಯಾಗಾರ

ಬಂಟ್ವಾಳ: ರೆಡ್ ಕ್ರಾಸ್ ಘಟಕ ರಾಜ್ಯ ದಕ್ಷಿಣ ಕನ್ನಡ ಫಟಕ, ಯುವ ರೆಡ್ ಕ್ರಾಸ್ ಫಟಕ ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಸರಕಾರಿ ಪ್ರಥಮ ದರ್ಜೆ ಕಾಲೇಜು ಬಂಟ್ವಾಳ ಆಶ್ರಯದಲ್ಲಿ ಒಂದು ದಿನದ ಪ್ರಥಮ ಚಿಕಿತ್ಸೆ ಕಾರ್ಯಾಗಾರ ಬಿ.ಸಿ.ರೋಡಿನ ರೋಟರಿ ಸಭಾಭವನದಲ್ಲಿ ಬುಧವಾರ ನಡೆಯಿತು.

ರೋಟರಿ ಕ್ಲಬ್ ಬಂಟ್ವಾಳ ಅಧ್ಯಕ್ಷ ಮೊಹಮ್ಮದ್ ವಳವೂರು ಕಾರ್ಯಕ್ರಮ ಉದ್ಘಾಟಿಸಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಸಭಾಪತಿ ಸಿ.ಎ.ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭ ಹಾರೈಸಿದರು,

 ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕಾರ್ಯಾಧ್ಯಕ್ಷ ಪ್ರಸಾದ್ ಕುಮಾರ್, ಪ್ರಿನ್ಸಿಪಾಲ್ ಡಾ. ಸತೀಶ್ ಗಟ್ಟಿ, ನೋಡೆಲ್ ಅಧಿಕಾರಿ ಡಾ. ಗಣಪತಿ ಗೌಡ, ಬಂಟ್ವಾಳ ತಾಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್, ಕುವೆಂಪು ಭಾಷಾ  ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಿರೀಶ್ ಭಟ್ ಅಜಕ್ಕಳ ಉಪಸ್ಥಿತರಿದ್ದರು,

ಜಾಹೀರಾತು

ಯುವ ರೆಡ್ ಕ್ರಾಸ್ ಘಟಕದ ಘಟಕಾಧಿಕಾರಿ ಪ್ರೊ.ಶಶಿಕಲಾ ಕೆ. ಸ್ವಾಗತಿಸಿದರು. ಸಚೇತ್ ಸುವರ್ಣ ಪ್ರಥಮ ಚಿಕಿತ್ಸೆ ತರಬೇತುದಾರು ತರಬೇತಿ ನೀಡಿದರು  ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು ಡಾ,ಅಪರ್ಣ ಆಳ್ವ ವಂದಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.