ಬಂಟ್ವಾಳ: ಕಲ್ಲಿನ ಕೋರೆಯ ತುಂಬಿದ ನೀರಿನಲ್ಲಿ ಆಯತಪ್ಪಿ ಬಿದ್ದು ಬಾಲಕ ಮೃತ ಪಟ್ಟ ಘಟನೆ ಹಿನ್ನೆಲೆಯಲ್ಲಿ ಈ ಕುರಿತು ಸೂಕ್ತ ತನಿಖೆ ನಡೆಯಬೇಕು ಹಾಗೂ ಮೃತ ಬಾಲಕನ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿ ಎಸ್.ಡಿ.ಪಿ.ಐ. ಬಂಟ್ವಾಳ ಪುರಸಭಾ ಸಮಿತಿ ವತಿಯಿಂದ ಬಂಟ್ವಾಳ ತಹಸೀಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. ನಿಯೋಗದಲ್ಲಿ ಎಸ್.ಡಿ.ಪಿ.ಐ ಬಂಟ್ವಾಳ ಅಧ್ಯಕ್ಷರಾದ ಶರೀಫ್ ವಳವೂರು, ಪುರಸಬಾ ಸದಸ್ಯರಾದ ಮುನೀಶ್ ಅಲಿ , ಇದ್ರೀಸ್ ಪಿ.ಜೆ, ಎಸ್.ಡಿ.ಪಿ.ಐ ಬಂಟ್ವಳ ವಿಧಾನಸಭಾ ಅಧ್ಯಕ್ಷ ಯೂಸುಫ್ ಆಲಡ್ಕ, ಇಕ್ಬಾಲ್ ನಂದರಬೆಟ್ಟು ಹಾಗು ಉಬೈದುಲ್ಲಾ ಉಪಸ್ಥಿತರಿದ್ದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೃತ ಬಾಲಕ ಕುಟುಂಬಕ್ಕೆ ಪರಿಹಾರ ಆಗ್ರಹಿಸಿ ಎಸ್.ಡಿ.ಪಿ.ಐ.ನಿಂದ ಮನವಿ"