ಬಂಟ್ವಾಳ: ಬೈಕ್ ನಲ್ಲಿ ಬಂದ ಇಬ್ಬರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ನಿಲ್ಲಿಸಿ ದಾರಿ ಕೇಳಿ ಬಳಿಕ ಮಹಿಳೆ ವಿಳಾಸ ಹೇಳುವ ಸಂದರ್ಭ ಕರಿಮಣಿ ಸರವನ್ನು ಸೆಳೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಸಜಿಪಮೂಡ ಗ್ರಾಮದ ಮಾರ್ನಬೈಲು ಸಮೀಪ ನಡೆದಿದೆ. ಮಾರ್ನಬೈಲು ಬೊಳ್ಳಾಯಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವತ್ಸಲಾ ನಾರಾಯಣ ಎಂಬವರ ಬಳಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯವೆಸಗಿದ್ದು, ಸುಮಾರು 12 ಗ್ರಾಂ ತೂಕದ ಕರಿಮಣಿ ಸರ ಕದ್ದೊಯ್ದಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಸ್ತೆ ಯಾವುದು ಎಂದು ಕೇಳಿ ಕರಿಮಣಿ ಸರ ಸೆಳೆದು ಪರಾರಿ"