ಬಂಟ್ವಾಳ

ಸೌತ್ ಕೆನರಾ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಬಂಟ್ವಾಳ ಅಧ್ಯಕ್ಷರಾಗಿ ಹರೀಶ್ ಕುಂದರ್ ಆಯ್ಕೆ

ಹರೀಶ್ ಕುಂದರ್
ಮಹಾಸಭೆ

ಬಂಟ್ವಾಳ: ಸೌತ್ ಕೆನರಾ ಫೊಟೋ ಗ್ರಾಫರ್ಸ್ ಅಸೋಸಿಯೇಶನ್ (ರಿ) ದ.ಕ. ಉಡುಪಿ ಜಿಲ್ಲೆ ಇದರ ಬಂಟ್ವಾಳ ವಲಯಾಧ್ಯಕ್ಷರಾಗಿ ಹರೀಶ್ ಕುಂದರ್ ಆಯ್ಕೆಯಾಗಿದ್ದಾರೆ.

ಬಿ.ಸಿ.ರೋಡಿನಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು. ಜಿಲ್ಲಾಧ್ಯಕ್ಷರಾದ ಶ್ರೀಧರ್ ಶೆಟ್ಟಿಗಾರ್  ವಾರ್ಷಿಕ ಸಭೆಯನ್ನು ಉದ್ಘಾಟಿಸಿದರು. ವಲಯದ ಅಧ್ಯಕ್ಷರಾದ ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರೀಶ್ ಅಡ್ಯಾರ್, ಜಿಲ್ಲಾ ಕೋಶಾಧಿಕಾರಿ ಆನಂದ್ ಬಂಟ್ವಾಳ್, ಸಹಕಾರಿ ಸಂಘದ ನಿರ್ದೇಶಕರಾದ ಹರೀಶ್ ರಾವ್ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ವಿಕೇಶ್ ಬಂಟ್ವಾಳ, ಕೋಶಾಧಿಕಾರಿ ವಿಕ್ರಂ ಫರಂಗಿಪೇಟೆ ಉಪಸ್ಥಿತರಿದ್ದರು. ಸಭೆಯಲ್ಲಿ   2021-2023ರ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅಧ್ಯಕ್ಷರಾಗಿ ಹರೀಶ್ ಕುಂದರ್, ಪ್ರಧಾನ ಕಾರ್ಯದರ್ಶಿಯಾಗಿ ರವಿ ಕಲ್ಪನೆ, ಕೋಶಾಧಿಕಾರಿಯಾಗಿ ರೋಷನ್ ಕಲ್ಲಡ್ಕ , ಗೌರವಾಧ್ಯಕ್ಷರಾಗಿ  ಕುಮಾರಸ್ವಾಮಿ, ಹರೀಶ್ ಮಾಣಿ, ಉಪಾಧ್ಯಕ್ಷರಾಗಿ ಮಹೇಶ್ ಶೆಟ್ಟಿ, ಬಾಲಕೃಷ್ಣ, ಜೊತೆ ಕಾರ್ಯದರ್ಶಿಯಾಗಿ ರಿಚಾರ್ಡ್, ಪ್ರವೀಣ್ ಚಂದ್ರ, ಸಂಘಟನೆ ಕಾರ್ಯದರ್ಶಿಯಾಗಿ ಹರೀಶ್ ನಾಟಿ, ಆನಂದ್ ಪೆರುವಾಯಿ, ಕ್ರೀಡಾ ಕಾರ್ಯದರ್ಶಿಯಾಗಿ ವಿವೇಕ್, ಪ್ರಶಾಂತ್, ಪತ್ರಿಕಾ ಪ್ರತಿನಿಧಿಯಾಗಿ ಲಕ್ಷ್ಮಣ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಮ್ ಇರಾ, ಬಿ.ಆರ್. ಕಬಕ ಆಯ್ಕೆಗೊಂಡಿದ್ದಾರೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ