ಬಂಟ್ವಾಳ

ದೆಹಲಿಯ ಅತ್ಯಾಚಾರ, ಹತ್ಯೆ ಘಟನೆ ಖಂಡಿಸಿ ಬಂಟ್ವಾಳದಲ್ಲಿ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಪ್ರತಿಭಟನೆ

ಬಂಟ್ವಾಳ: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ, ಹತ್ಯೆ ಘಟನೆ ಖಂಡಿಸಿ, ಪಾತಕಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಮನ್ವಯ ಸಮಿತಿ ಬಂಟ್ವಾಳ ತಾಲೂಕು ನೇತೃತ್ವದಲ್ಲಿ ಪ್ರತಿಭಟನೆ ಬಿ.ಸಿ.ರೋಡಿನಲ್ಲಿ ನಡೆಯಿತು.

ಮಾನವ ಬಂಧುತ್ವ ವೇದಿಕೆಯ ರಾಜ್ಯ ವಿಭಾಗೀಯ ಸಂಚಾಲಕ ಸತೀಶ್ ಕುಮಾರ್, ಜೆಡಿಎಸ್ ಮುಖಂಡರಾದ ಮೊಹಮ್ಮದ್ ಶಾಫಿ, ಸಂಘಟನೆಯ ಪ್ರಧಾನ ಕಾರ್ಯದರ್ಶಿ ಬಿ.ಶೇಖರ್, ಬುಡಾ ಮಾಜಿ ಅಧ್ಯಕ್ಷ ಸದಾಶಿವ ಬಂಗೇರ ಮಾತನಾಡಿದರು.

ಸಂಘಟನೆಯ ಗೌರವ ಸಲಹೆಗಾರರಾದ ಬಿ.ಎಂ ಪ್ರಭಾಕರ ದೈವಗುಡ್ಡೆ, ಅಧ್ಯಕ್ಷ ಪ್ರಕಾಶ್ ಬಿ. ಶೆಟ್ಟಿ ಶ್ರೀಶೈಲ ತುಂಬೆ, ರಾಜಾ ಚಂಡ್ತಿಮಾರ್, ಜಗನ್ನಾಥ್ ಬಂಟ್ವಾಳ, ಸಯ್ಯದ್ ಅಬ್ದುಲ್ ಕರೀಂ, ರಿಚರ್ಡ್ ಶಂಭೂರು, ಮ್ಯಾಕ್ಸಿಮ್ ಹಾಗೂ ಬದ್ರುದ್ದೀನ್ ನಾವೂರು. ಕಾನೂನು ಸಲಹೆಗಾರ ನ್ಯಾಯವಾದಿ ಚಂದ್ರಶೇಖರ ಪೂಜಾರಿ, ಸುರೇಂದ್ರ ಕೋಟ್ಯಾನ್, ಕಾಂಗ್ರೆಸ್ ಮುಖಂಡ ಬೇಬಿ ಕುಂದರ್, ಪುರಸಭಾ ಸದಸ್ಯ ಲೋಲಾಕ್ಷ, ಸೀತರಾಮ ಶೆಟ್ಟಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಸಂಘಟನೆಯ ಸಹಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ಸ್ವಾಗತಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.