ಬಂಟ್ವಾಳ

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಟಾನ ಆರಂಭ

ಬಂಟ್ವಾಳ: ಪಾಣೆಮಂಗಳೂರು ನಂದಾವರದಲ್ಲಿ ಶ್ರೀಕ್ಷೇತ್ರ ವಿನಾಯಕ ಶಂಕರನಾರಾಯಣ  ದುರ್ಗಾಂಬಾ ದೇವಳದ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡುವ ಮೂಲಕ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ (ರಿ) ಮೆಲ್ಕಾರ್ ಬಂಟ್ವಾಳ ಆರಂಭಗೊಂಡಿತು. ದೇವಳದ ಪರಿಸರದಲ್ಲಿ ಹುಲ್ಲು ಹಾಗೂ ಕಸ ತೆಗೆಯುವ ಮೂಲಕ ಸದಸ್ಯರು ಪಾಲ್ಗೊಂಡರು, ಶ್ರೀ ಮಹಾಗಣಪತಿ ಹೋಮ ಮತ್ತು ಸಾಮೂಹಿಕ ಪ್ರಾರ್ಥನೆ ನೆರವೇರಿತು. ಈ ಸಂದರ್ಭದಲ್ಲಿ ಪ್ರತಿಷ್ಠಾನದ  ಗೌರವಾಧ್ಯಕ್ಷರಾದ ಪ್ರೊ. ಎ. ವಿ. ನಾರಾಯಣ ಪ್ರತಿಷ್ಠಾನದ ಅಧ್ಯಕ್ಷರಾದ ಕೈಯೂರು ನಾರಾಯಣ ಭಟ್ ಸದಸ್ಯರಾದ ಎಂ. ಆರ್. ವಾಸುದೇವ, ಭಾಸ್ಕರ ಬಾರ್ಯ, ದುಗ್ಗಪ್ಪ .ಯನ್, ಜಯರಾಮ  ಭಂಡಾರಿ, ಜಯರಾಮ ಪೂಜಾರಿ, ಬಿ.ಎಂ ಮಹಾಲಿಂಗ ಭಟ್ ಮುರಳಿಧರ ರಾವ್, ದಿವಾಕರ ಆಚಾರ್ಯ ಗೇರುಕಟ್ಟೆ, ಜಯಾನಂದ ಪೆರಾಜೆ ಉಪಸ್ಥಿತರಿದ್ದರು.ಪ್ರತಿಷ್ಠಾನದ ಪ್ರಧಾನ ಸಂಚಾಲಕ ನಾರ್ಯ ಶ್ರೀನಿವಾಸಶೆಟ್ಟಿ ಸ್ವಾಗತಿಸಿದರು. ಲೋಕೇಶ್ ಹೆಗ್ದೆ ಪುತ್ತೂರು ವಂದಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ