ಬಂಟ್ವಾಳ

ಪ್ರಧಾನಿ ಜನ್ಮದಿನಾಚರಣೆ: ಬಿಜೆಪಿ ಬಂಟ್ವಾಳದಿಂದ ಸ್ವಚ್ಛತಾ ಕಾರ್ಯಕ್ರಮ

https://public.app/video/sp_eq422gdtjncmw

ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ನಿಮಿತ್ತ ಬಿಜೆಪಿಯ ಬಂಟ್ವಾಳದ ಕಾರ್ಯಕರ್ತರು ಬಿ.ಸಿ.ರೋಡ್ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು. ಭಾರತೀಯ ಜನತಾ ಪಾರ್ಟಿ,ಬಂಟ್ವಾಳ ಮಂಡಲದ ವತಿಯಿಂದ ಪ್ರಧಾನಿ ಶ್ರೀ ನರೇಂದ್ರ  ಮೋದಿಜೀಯವರ 71 ನೇ ಹುಟ್ಟುಹಬ್ಬದ ಪ್ರಯುಕ್ತ ಈ ದಿನ ಬಿ.ಸಿ.ರೋಡಿನಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಈ ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಧರ್ಶನ್ .ಎಂ ಜಿಲ್ಲಾ ಪ್ರಭಾರಿ ರಾಜೇಶ್ ಕಾವೇರಿ, ಹಿಂದುಳಿದ ವರ್ಗ ಮೋರ್ಚಾದ ಜಿಲ್ಲಾಧ್ಯಕ್ಷ  ಆರ್.ಸಿ. ನಾರಾಯಣ ಆಗಮಿಸಿ ಶುಭ ಹಾರೈಸಿದರು.ಕಾರ್ಯಕ್ರಮದಲ್ಲಿ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ದೇವದಾಸ್ ಶೆಟ್ಟಿ, ಪ್ರದಾನ ಕಾರ್ಯದರ್ಶಿಗಳಾದಡೊಂಬಯ್ಯ ಅರಳ, ರವೀಶ್ ಕರ್ಕಳ, ಚಿದಾನಂದ ರೈ, ರೋನಾಲ್ಡ್ ಡಿ ಸೋಜ, ಸೀತಾರಾಮ್ ಪೂಜಾರಿ, ರಮಾನಾಥ ರಾಯಿ, ಕೇಶವ ದೈಪಲ, ಗಣೇಶ್ ದಾಸ್ , ಸತೀಶ್ ಶೆಟ್ಟಿ ಮೊಡಂಕಾಪು, ಪ್ರಣಾಮ್ ಅಜ್ಜಿಬೆಟ್ಟು, ಯಶವಂತ ನಗ್ರಿ, ಮಹೇಶ್ ಶೆಟ್ಟಿ, ಚಂದ್ರಶೇಖರ್, ರಂಜಿತ್ ಮಣಿನಾಲ್ಕೂರು,  ಪಾಲ್ಗೊಂಡಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.