ಬಂಟ್ವಾಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ವಿಶ್ವಕರ್ಮ ದಿನಾಚರಣೆ

ವಿಶ್ವಗುರು ವಿಶ್ವಕರ್ಮ ಅವರು ದ್ವಾರಕಾ ನಗರವನ್ನು ನಿರ್ಮಿಸಿಕೊಟ್ಟ ಪುಣ್ಯ ದಿನವನ್ನುವಿಶ್ವಕರ್ಮ ದಿನವಾಗಿ ದೇಶದಾದ್ಯಂತ ಆಚರಿಸಲಾಗುತ್ತಿದೆ ಎಂದು ಎಸ್.ವಿ.ಎಸ್. ಪ್ರೌಢಶಾಲೆಯ ಸಂಸ್ಕೃತ ಶಿಕ್ಷಕ ಮುರಳೀಧರ  ಆಚಾರ್ಯರು ಹೇಳಿದರು.

ಅವರು ಬಂಟ್ವಾಳ ಬಿಜೆಪಿ ಓಬಿಸಿ ಮೋರ್ಚಾ ಏರ್ಪಡಿಸಿದ ವಿಶ್ವಕರ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಮುಖ ಭಾಷಣಕಾರರಾಗಿ ಭಾಗವಹಿಸಿದ್ದರು.

ಅಧ್ಯಕ್ಷತೆಯನ್ನು ಮಂಡಲ ಬಿಜೆಪಿ ಓಬಿಸಿ ಮೋರ್ಚಾದ ಅಧ್ಯಕ್ಷರಾದ ಆನಂದ ಶಂಭೂರು ವಹಿಸಿಕೊಂಡಿದ್ದರು. ಮಂಡಲ ಬಿಜೆಪಿ ಉಪಾಧ್ಯಕ್ಷರಾದ ಚಿದಾನಂದ ರೈ, ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ,  ಓಬಿಸಿ ಮೋರ್ಚಾದ ಮಂಡಲ ಪ್ರಭಾರಿ ಪ್ರಕಾಶ್ ಅಂಚನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಬಂಟ್ವಾಳ ಬಿಜೆಪಿ ಮಂಡಲ ಕಾರ್ಯದರ್ಶಿ ರಮಾನಾಥ ರಾಯಿ ಜಿಲ್ಲಾ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಪುರುಷೋತ್ತಮ, ಬಂಟ್ವಾಳ ಓಬಿಸಿ ಮೋರ್ಚಾದ ಉಪಾಧ್ಯಕ್ಷರಾದ ಗೋಪಾಲ, ಕಾರ್ಯದರ್ಶಿ ಚಿದಾನಂದ, ಪ್ರಮುಖರಾದ ಜಯಪ್ರಕಾಶ್ ಆಚಾರ್ಯ ಭಂಡಾರಿಬೆಟ್ಟು, ಹರೀಶ್ ಆಚಾರ್ಯ ರಾಯಿ, ಲಕ್ಷ್ಮಿ ಗೋಪಾಲಾಚಾರ್ಯ ಬಾಳ್ತಿಲ, ವಾಮನ ಆಚಾರ್ಯ ಅಮ್ಮುಂಜೆ, ಮುಂತಾದವರು ಭಾಗವಹಿಸಿದ್ದರು. ಮಂಡಲ ಓಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಉಮೇಶ್ ಅರಳ ಸ್ವಾಗತಿಸಿ, ಕಾರ್ಯದರ್ಶಿ ಮೋಹನದಾಸ್  ಕೊಠಾರಿ ವಂದಿಸಿದರು. ರಮೇಶ್ ಪುರೋಹಿತರು ಪ್ರಾರ್ಥನಾ ಶ್ಲೋಕ ಹೇಳಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಂಟ್ವಾಳ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ವಿಶ್ವಕರ್ಮ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*