ಕಲ್ಲಡ್ಕ

ಮಜಿ ವೀರಕಂಭ ಶಾಲೆ ಪೋಷಕರ ಸಭೆ: ಅಧ್ಯಕ್ಷರಾಗಿ ಸಂಜೀವ ಮೂಲ್ಯ ಆಯ್ಕೆ

ಬಂಟ್ವಾಳ: ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆ ಮಜಿ ವೀರಕಂಭದ ಎಸ್.ಡಿ.ಎಂ.ಸಿ. ಸಭೆ ನಡೆದಿದ್ದು, ಈ ಸಂದರ್ಭ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಸಂಜೀವ ಮೂಲ್ಯ ಆಯ್ಕೆಗೊಂಡಿದ್ದಾರೆ.ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಸರಕಾರದಿಂದ ಉಚಿತವಾಗಿ ನೀಡುವ ಪಠ್ಯಪುಸ್ತಕವನ್ನು ಸಾಂಕೇತಿಕವಾಗಿ ವಿತರಿಸಿದರು,

ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ವೇಗಸ್, ಸದಸ್ಯರಾದ ಜಯಂತಿ ಜನಾರ್ಧನ್, ಗೀತಾ ಜಯಶೀಲ ಗಾಂಭೀರ್, ಮೀನಾಕ್ಷಿ ಸುನಿಲ್, ಉಮಾವತಿ ಸಪಲ್ಯ, ಜಯಪ್ರಸಾದ್ ಇವರ ಉಪಸ್ಥಿತಿಯಲ್ಲಿ ನಡೆದ ನೂತನ ಶಾಲಾಭಿವೃದ್ಧಿ ಸಮಿತಿಯ ರಚನೆಯ ರೂಪರೇಷೆಗಳನ್ನು ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಅವರು ನೀಡಿದರು. ಮುಂದಿನ ಅವಧಿಗೆ ನೂತನ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ  ಸಂಜೀವ ಮೂಲ್ಯ ಮಜಿ,  ಉಪಾಧ್ಯಕ್ಷರಾಗಿ ವಿಜಯ ಶೇಖರ್ ಬೆತ್ತಸರವು ಅವಿರೋಧವಾಗಿ ಆಯ್ಕೆಯಾದರು. ಉಳಿದಂತೆ ಸದಸ್ಯರಾಗಿ ಗೋಪಾಲಕೃಷ್ಣ ಭಟ್ ದಿವಾನ, ಕೊರಗಪ್ಪ ನಾಯ್ಕ ಸಿಂಗೇರಿ, ವಾಮನ ಬಂಗೇರ ನೆಕ್ಕರಾಜೆ, ವಿಶ್ವನಾಥ್ ಎಮ್ಮೆ೯ಮಜಲು, ಸಾವಿತ್ರಿಬೋಳಂಗಡಿ, ಉಮಾವತಿ ಮಜಿ, ವೀಣಾ ಮೈರ, ವನಿತಾ ತಾಳಿತ್ತನೂಜಿ ,ಉಮ್ಮರ್ ಫಾರೂಕ್ ಕೊಡಪದವು ಮದಕ ,ಬಿಕೆ ಅಬ್ದುಲ್ ಮಜೀದ್ ವೀರಕಂಬ,  ಸುರೇಶ್ ನಾಯ್ಕ ಬೆತ್ತಸರವು ಲಕ್ಷ್ಮಣಗೌಡ ನಂದನತಿಮಾರು, ಅಸ್ಲಿಮಾ ಕಂಪದಬೈಲು, ರಂಜಿತಾ ಮಜಿ, ಹರಿಣಾಕ್ಷಿ ಕೇಪುಲಕೊಡಿ, ಸರಿತಾಪ್ರಾಂಕ್ ಮಜಿ, ಆಯ್ಕೆಯಾದರು.
ಸಮಿತಿಯ ಕಾರ್ಯದರ್ಶಿಯಾಗಿ ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಪದನಿಮಿತ್ತ ಸದಸ್ಯರಾಗಿ ಸಹಶಿಕ್ಷಕಿ ಶಕುಂತಲಾ ಎಂ ಬಿ, ಕಿರಿಯ ಆರೋಗ್ಯ ಸಹಾಯಕಿ ಜ್ಯೋತಿ ಎನ್ ಕೆ ,ಪಂಚಾಯತ್ ಸದಸ್ಯೆ ಜಯಂತಿ ಜನಾರ್ಧನ್, ಅಂಗನವಾಡಿ ಶಿಕ್ಷಕಿ ಸುಮತಿ ,ಹಾಗೂ ಶಾಲಾ ವಿದ್ಯಾರ್ಥಿನಿ ಶ್ರೇಯಳನ್ನು ಆಯ್ಕೆ ಮಾಡಲಾಯಿತು.ಶಾಲಾ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕ ರಾಘವೇಂದ್ರ ಶಿಕ್ಷಕಿಯರಾದ  ಸಿಸಿಲಿಯ, ಶಕುಂತಲಾ, ಅನುಷಾ, ಮುಷೀ೯ದಾಬಾನು ಸಹಕರಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

52 minutes ago