ಬಂಟ್ವಾಳ

ಪಡಿತರ ಅಕ್ಕಿ ಕಾನೂನುಬಾಹಿರ ಸಾಗಾಟ ಪತ್ತೆ, ಆರೋಪಿ ಬಂಧನ

ಬಂಟ್ವಾಳ: ಗೂಡ್ಸ್ ಕ್ಯಾರಿಯರ್ ಒಂದರಲ್ಲಿ ಪಡಿತರ ಅಕ್ಕಿಗಳಿರುವ 50 ಕೆಜಿಯ 40 ಗೋಣಿಚೀಲವನ್ನು ಕಾನೂನುಬಾಹಿರವಾಗಿ ಸಾಗಾಟ ಮಾಡುವ ಪ್ರಕರಣವನ್ನು ಬಂಟ್ವಾಳ ತಾಲೂಕಿನ ಆಹಾರ ನಿರೀಕ್ಷಕರು ಪತ್ತೆಹಚ್ಚಿದ್ದು, ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜಿಪನಡು ಗ್ರಾಮದ ಬಸ್ತಿಗುಡ್ಡೆಯ ನೌಫಲ್ ಬಿನ್ ಯೂಸೂಫ್ (26) ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬಾಳ್ತಿಲ ಗ್ರಾಮದ ಕೊಡಂಗೆಕೋಡಿ ಎಂಬಲ್ಲಿ ಬಿ.ಸಿ.ರೋಡ್ ಕಡೆಗೆ ಸಾಗುತ್ತಿದ್ದ ಗೂಡ್ಸ್ ಕ್ಯಾರಿಯರ್ ಅನ್ನು ಆಹಾರ ಶಿರಸ್ತೇದಾರ್ ನೇತೃತ್ವದಲ್ಲಿ ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಉಚಿತ ಪಡಿತರ ಅಕ್ಕಿಗಳುಳ್ಳ ತಲಾ 50 ಕೆ.ಜಿ.ಯ 40 ಗೋಣಿ ಚೀಲಗಳನ್ನು(2ಟನ್) ಅಕ್ರಮವಾಗಿ ಹಾಗೂ ಕಾನೂನು ಬಾಹಿರವಾಗಿ ಸಾಗಾಟ ಮಾಡುತ್ತಿರುವುದು ಕಂಡು ಬಂದಿರುವುದರಿಂದ ಅಕ್ಕಿಗಳುಳ್ಳ ಗೋಣಿ ಚೀಲಗಳನ್ನು ವಶಪಡಿಸಿಕೊಂಡು ಹಾಳಾಗುವ ಹಿತದೃಷ್ಟಿಯಿಂದ ಬಿ.ಸಿ.ರೋಡಿನ ಕೆ.ಎಫ್.ಸಿ ಗೋದಾಮಿಗೆ ದಾಸ್ತಾನು ಇರಿಸಲಾಯಿತು. ಕಾನೂನು ಬಾಹಿರವಾಗಿ ಸಾಗಾಟ ಮಾಡಿದ ವಾಹನವನ್ನು ವಶಪಡಿಸಿಕೊಂಡು ಚಾಲಕ ಸಜಿಪನಡು ಗ್ರಾಮದ ಬಸ್ತಿಗುಡ್ಡೆಯ ನೌಫಲ್ ಬಿನ್ ಯೂಸೂಫ್ (26) ಎಂಬಾತನ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದ್ದು, ತನಿಖೆ ಸಾಗಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ