![](https://i0.wp.com/bantwalnews.com/wp-content/uploads/2021/09/WhatsApp-Image-2021-08-31-at-18.02.39.jpeg?resize=826%2C1024&ssl=1)
![](https://i0.wp.com/bantwalnews.com/wp-content/uploads/2021/08/WhatsApp-Image-2021-08-26-at-23.53.33.jpeg?resize=723%2C1024&ssl=1)
![](https://i0.wp.com/bantwalnews.com/wp-content/uploads/2021/07/aaniya-darbar.jpeg?resize=456%2C640&ssl=1)
![](https://i0.wp.com/bantwalnews.com/wp-content/uploads/2021/01/Bantwalnews-1.jpg?resize=1024%2C516&ssl=1)
![](https://i0.wp.com/bantwalnews.com/wp-content/uploads/2021/09/VIDEO_b688ab0f-5be3-435f-9e0d-cb966c45ef69.jpg?resize=500%2C281&ssl=1)
ಬಂಟ್ಚಾಳ: ಕೇಂದ್ರ ಸರ್ಕಾರ ರೈತ, ದಲಿತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಸೆ.27ರಂದು ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಜಿಲ್ಲಾ ಮಟ್ಟದ ಹೆದ್ದಾರಿ ತಡೆ ಪ್ರತಿಭಟನೆ ನಡೆಯಲಿದೆ.
ಈ ವಿಷಯವನ್ನು ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ಜಿಲ್ಲಾ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಬಾಳ್ತಿಲ ತಿಳಿಸಿದರು.
ರಾಷ್ಟ್ರದಾದ್ಯಂತ ಈಗಾಗಲೇ ಭಾರತ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಮಿನಿ ವಿಧಾನಸೌಧ ಮುಂಭಾಗದಿಂದ ನಾರಾಯಣಗುರು ವೃತ್ತದವರೆಗೆ ಜಾಥಾ ನಡೆಯಲಿದೆ. ಇದು ಜಿಲ್ಲಾ ಮಟ್ಟದ ಕಾರ್ಯಕ್ರಮವಾಗಿದ್ದು ವಿವಿಧ ಸಂಘಟನೆಗಳ ಬೆಂಬಲ ಇದೆ ಎಂದವರು ಮಾಹಿತಿ ನೀಡಿದರು.
ರೈತರ ಹೋರಾಟದ ಕುರಿತು ಗೇಲಿ ಮಾಡಲಾಗುತ್ತಿದ್ದು, ಇದು ಖಂಡನೀಯ ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ರಾಮಣ್ಣ ವಿಟ್ಲ ಈ ಸಂದರ್ಭ ಹೇಳಿದರು. ರಾಜ್ಯ ರೈತ ಸಂಘ ಬಂಟ್ವಾಳ ತಾಲೂಕು ಸಂಘಟನಾ ಕಾರ್ಯದರ್ಶಿ ಸದಾನಂದ ಶೀತಲ್, ಕೋಶಾಧಿಕಾರಿ ಡಿ.ಕೆ.ಸಾಹುಲ್ ಹಮೀದ್, ಡಿವೈಎಫ್ ಐ ಬಂಟ್ವಾಳ ತಾಲೂಕು ಕಾರ್ಯದರ್ಶಿ ನ್ಯಾಯವಾದಿ ತುಳಸೀದಾಸ್ ವಿಟ್ಲ ಸುದ್ದಿಗೋಷ್ಠಿಯಲ್ಲಿ ಜತೆಗಿದ್ದರು.
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "27ರಂದು ಬಿ.ಸಿ.ರೋಡಿನಲ್ಲಿ ಹೆದ್ದಾರಿ ತಡೆ, ಪ್ರತಿಭಟನಾ ಸಭೆ"