ನರಿಕೊಂಬು ಬಿಜೆಪಿಯಿಂದ ಸೇವಾ, ಸಮರ್ಪಣಾ ಅಭಿಯಾನ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ನರಿಕೊಂಬು ಇದರ ವತಿಯಿಂದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ 71 ನೇ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಹಾಗೂ ಸಮರ್ಪಣಾ ಅಭಿಯಾನ ಕಾರ್ಯಕ್ರಮ ನರಿಕೊಂಬು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಅಧ್ಯಕ್ಷತೆಯಲ್ಲಿ ನಡೆಯಿತು.

ಕೋರೋಣ ನಿಯಂತ್ರಣಕ್ಕಾಗಿ ನರಿಕೊಂಬು ಗ್ರಾಮದಲ್ಲಿ ಅಹರ್ನಿಶಿ ಶ್ರಮಿಸಿದ ಗ್ರಾಮ ಲೆಕ್ಕಾಧಿಕಾರಿ ಅತೀಕ್ ಕುಮಾರ್, ಗ್ರಾಮ ಪಂಚಾಯತ್ ಸಿಬ್ಬಂದಿ ಪ್ರವೀಣ್ ಕುಮಾರ್, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಸುಮತಿ ಎಮ್. ಹಾಗೂ ಆಶಾ ಕಾರ್ಯಕರ್ತೆಯರಾದ ಅನಿತಾ,  ಬೇಬಿ, ಸಾವಿತ್ರಿ, ಲೀಲಾವತಿ, ಶೋಭಾ ಎಮ್., ವಿಜಯ, ಪೂರ್ಣಿಮ, ಸುಜಾತ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಅತಿಥಿಗಳಾಗಿ ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ನಿರ್ದೇಶಕರಾದ ಸುಲೋಚನಾ ಜಿ.ಕೆ ಭಟ್, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ ಪೂಜಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ , ಹಿರಿಯ ಕಾರ್ಯಕರ್ತರಾದ ಕೊರಗಪ್ಪ ಬಂಗೇರ ಕೆದ್ದೇಲು, ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಪ್ರಕಾಶ್ ಮಡಿಮುಗೇರ್ ಭಾಗವಹಿಸಿದ್ದರು. ಈ ಸಂದರ್ಭ ಬಿಜೆಪಿ ಗ್ರಾಮ ಸಮಿತಿ ಸಹ ಸಂಚಾಲಕ ರಂಜಿತ್ ಮಾಣಿಮಜಲು, ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಸದಸ್ಯರಾದ ಪ್ರೇಮನಾಥ ಶೆಟ್ಟಿ, ಬಿಜೆಪಿ ಜಿಲ್ಲಾ ಎಸ್. ಸಿ. ಮೋರ್ಚಾ ಕಾರ್ಯದರ್ಶಿ ಸುರೇಂದ್ರ ನರಿಕೊಂಬು, ಜಿಲ್ಲಾ ಬಿಜೆಪಿ ಎಸ್.ಟಿ. ಮೋರ್ಚಾ ಮಾಧ್ಯಮ ಪ್ರತಿನಿಧಿ ಪುರುಷೋತ್ತಮ ಕೊಪ್ಪಲಕೋಡಿ, ಬಿಜೆಪಿ  ಪಂಚಾಯತ್ ಸದಸ್ಯರುಗಳಾದ ಅರುಣ್ ಬೋರುಗುಡ್ಡೆ, ರವಿ ಅಂಚನ್ ಅಬೆರೊಟ್ಟು, ರಂಜಿತ್ ಕೆದ್ದೇಲು, ನಾರಾಯಣ ದರ್ಖಾಸು, ಸಂತೋಷ್ ಕುಮಾರ್ ಶಂಭೂರು, ಉಷಾ ರಮಾನಂದ, ಶುಭ ಶಶಿಧರ್, ಮಮತಾ ಸುಧೀರ್, ರತ್ನ ನಿನ್ನಿಪಡ್ಪು, ಬಂಟ್ವಾಳ ರೈತ ಮೋರ್ಚಾ ಸದಸ್ಯರಾದ ಉದಯ ಕುಮಾರ್ ಶೆಟ್ಟಿ, ಬಿಜೆಪಿ ಬಂಟ್ವಾಳ ಮಹಿಳಾ ಮೋರ್ಚಾ ಸದಸ್ಯರಾದ ಭಾರತಿ, ಬಂಟ್ವಾಳ ಬಿಜೆಪಿ ಕ್ಷೇತ್ರ ಸಮಿತಿ ಸದಸ್ಯರಾದ ಶೋಭಾ ಶೆಟ್ಟಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ. ನಿರ್ದೇಶಕರಾದ ಶ್ರೀಶ ರಾಯಸ, ಪ್ರಮುಖರಾದ ಬೂಬ ಸಾಲಿಯಾನ್, ಪುರುಷೋತ್ತಮ ಬಂಗೇರ, ಕಮಲಾಕ್ಷ ಭೀಮಗದ್ದೆ, ತಿಲಕ್ ರಾಜ್, ಗಣೇಶ್ ಕುಮಾರ್ ಅಂತರ, ಲೋಕೇಶ್ ಕರ್ಬೆಟ್ಟು, ಮಹೇಶ್ ರಾಯಸ, ದಯಾನಂದ ನೆಲ್ಯಡ್ಕ, ರೋಹಿತ್ ಪೂಜಾರಿ ಬೋಳಂತೂರು, ರಮಾನಾಥ ಪೈ, ಕರುಣಾಕರ ನೆಲ್ಯಡ್ಕ, ಪ್ರವೀಣ್ ಕುಮಾರ್ ತಾರಿಪಡ್ಪು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ನರಿಕೊಂಬು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶೋಧರ ಕರ್ಬೆಟ್ಟು ಸ್ವಾಗತಿಸಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷರಾದ ಪುರುಷೋತ್ತಮ ಸಾಲ್ಯಾನ್ ಪ್ರಸ್ತಾವನೆಗೈದು,  ಬಿಜೆಪಿ ನರಿಕೊಂಬು ಗ್ರಾಮ ಸಮಿತಿ ಸಂಚಾಲಕರಾದ ಕಿಶೋರ್ ಶೆಟ್ಟಿ ಧನ್ಯವಾದ ಸಮರ್ಪಿಸಿದರು. ಬಂಟ್ವಾಳ ತಾಲೂಕು ಯುವ ಮೋರ್ಚಾ ಉಪಾಧ್ಯಕ್ಷರಾದ ಸುರೇಶ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ನರಿಕೊಂಬು ಬಿಜೆಪಿಯಿಂದ ಸೇವಾ, ಸಮರ್ಪಣಾ ಅಭಿಯಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*