ದೇಶಪ್ರೇಮ ಬೆಳೆಸುವ ಕಲ್ಪನೆ ಸಾಕಾರಗೊಳಿಸಿ: ನರಿಕೊಂಬಿನಲ್ಲಿ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ದೀನ್ ದಯಾಳ್ ಅವರ ದೇಶ ಪ್ರೇಮವನ್ನು ಬೆಳೆಸುವ  ಪರಿಕಲ್ಪನೆಯನ್ನು ಪ್ರತಿ ಗ್ರಾಮದಲ್ಲಿ  ಸಾಕಾರಗೊಳಿಸುವ ಪ್ರತಿಜ್ಞೆಯನ್ನು ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು.ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ನರಿಕೊಂಬು ಗ್ರಾಮದ 111 ನೇ ಬೂತ್ ನಲ್ಲಿ ನಡೆದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ 105 ನೇ  ಜನ್ಮ ದಿನಾಚರಣೆ ಅಂಗವಾಗಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಮಾತನಾಡಿ ಚಳವಳಿ ಮತ್ತು ಸೇವೆಯ ಮೂಲಕ ಸಂಘಟನಾತ್ಮಕ ಬೆಳವಣಿಗೆಯ ಮೂಲಕಲ್ಪನೆ ಮತ್ತು ಸೇವೆ ಮತ್ತು ಸಮರ್ಪಣೆಯ ಪ್ರೇರಣೆ  ದೀನ್ ದಯಾಳ್ ಉಪಾಧ್ಯಾಯ ಅವರದು ಎಂದರು.

ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷೆ  ವಿನುತ ಪುರುಷೋತ್ತಮ,  ನರಿಕೊಂಬು ಬೂತ್ ನ ಶಕ್ತಿ ಕೇಂದ್ರದ ಅಧ್ಯಕ್ಷ ಯಶೋಧರ ಕರ್ಬೆಟ್ಟು, ಜಿಲ್ಲಾ ಹಿಂದುಳಿದ ಮೋರ್ಚಾದ ಉಪಾಧ್ಯಕ್ಷ ಪುರುಷೋತ್ತಮ ಸಾಲಿಯಾನ್ ನರಿಕೊಂಬು, ಜಿ.ಪಂ. ಮಾಜಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ,  ಗ್ರಾ.ಪಂ.ಸದಸ್ಯರಾದ  ರವಿ ಅಂಚನ್, ಅರುಣ್ ಕುಲಾಲ್ ಬೋರುಗುಡ್ಡೆ, ಚೇತನ್ ದಿಂಡಿಕೆರೆ, ನಾರಾಯಣ ದರ್ಖಾಸು, ವಿಶಾಲಾಕ್ಷಿ ರಮಾನಂದ, ಚಿತ್ರಾಕ್ಷಿ ಸುರೇಶ್ ಕುಲಾಲ್, ಶುಭಾಶಶಿಧರ್, ಮೋಹಿನಿ ವಾಮನ ಕುಲಾಲ್,  ಬೂತ್ ಸಂಚಾಲಕ ಕಿಶೋರ್ ಶೆಟ್ಟಿ, ಸಹಸಂಚಾಲಕ ರಂಜಿತ್ ಮಾಣಿಮಜಲು, ಕ್ಷೇತ್ರ ಕಾರ್ಯದರ್ಶಿ ಪುರುಷೋತ್ತಮ ಶೆಟ್ಟಿ ವಾಮದಪದವು, ಹಿರಿಯ ರಾದ ರಘು ಸಪಲ್ಯ, ರೈತ ಮೋರ್ಚಾದ ಜಿಲ್ಲಾ ಸದಸ್ಯ ಪ್ರೇಮನಾಥ ಶೆಟ್ಟಿ, ಪ್ರಮುಖರಾದ ರಾಜೇಶ್ ಬೋಳಂತೂರು, ಶೋಭಾ ಶೆಟ್ಟಿ, ರೋಹಿತ್ ಪೂಜಾರಿ ಬೋಳಂತೂರು, ದಯಾನಂದ ನೆಲ್ಯಡ್ಕ, ಪ್ರಕಾಶ್ ನೆಲ್ಯಡ್ಕ, ಪ್ರಜಿತ್ , ಚರಣ್, ಪುರುಷೋತ್ತಮ ಬಂಗೇರ ನಾಟಿ, ಪ್ರಶಾಂತ್ ಶಾಂತಿ, ಕರುಣಾಕರ , ಪುರುಷೋತ್ತಮ ಕೊಪ್ಪಳಕೋಡಿ ಮತ್ತಿತರರು ಉಪಸ್ಥಿತರಿದ್ದರು.ಸಮರ್ಪಣಾ ಕಾರ್ಯ ಕ್ರಮದ ಅಂಗವಾಗಿ ಕೋವಿಡ್ ಸಮಯದಲ್ಲಿ ನಿಯಂತ್ರಣಕ್ಕಾಗಿ ಮತ್ತು ಜನರ ವಿಶೇಷ ಸೇವೆ ಮಾಡಿದ ನರಿಕೊಂಬು ಗ್ರಾಮಪಂಚಾಯತ್ ಸಿಬ್ಬಂದಿ ಪ್ರವೀಣ್ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದೇಶಪ್ರೇಮ ಬೆಳೆಸುವ ಕಲ್ಪನೆ ಸಾಕಾರಗೊಳಿಸಿ: ನರಿಕೊಂಬಿನಲ್ಲಿ ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*