ಬಂಟ್ವಾಳ

ಕೆಂಪುಗುಡ್ಡೆಯಲ್ಲಿ ಯಕ್ಷ ನಾಟ್ಯ ತರಬೇತಿ ಉದ್ಘಾಟನೆ

ಬಂಟ್ವಾಳ: ಮುಂದಿನ ದಿನಗಳಲ್ಲಿ ಯಕ್ಷಗಾನ ತಂಡಗಳು ಉಳಿಯಬೇಕಾದರೆ ಯಕ್ಷ ನಾಟ್ಯದ ತರಗತಿಗಳು ಅನಿವಾರ್ಯವಾಗಿರುತ್ತದೆ. ಯಕ್ಷನಾಟ್ಯ ತಂಡಗಳು ಆರಂಭವಾದರೂ ಅದನ್ನು ಮುಂದಿನ ದಿನಗಳಲ್ಲಿ ಉಳಿಸಿಬೆಳೆಸುವುದು ನಮ್ಮ ಕರ್ತವ್ಯ ಎಂದು ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ್ ಆಚಾರ್ಯ ತಿಳಿಸಿದರು.

ಭಾನುವಾರ ಕೆಂಪುಗುಡ್ಡೆ ಡಾ.ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಯಕ್ಷ ಪ್ರೇಮಿಲು ಬಂಟ್ವಾಳ ಇದರ ಆಶ್ರಯದಲ್ಲಿ ನಡೆದ ತೆಂಕುತಿಟ್ಟು ಯಕ್ಷಗಾನದ ನಾಟ್ಯ ತರಬೇತಿಯ ಉದ್ಘಾಟಿಸಿ ಮಾತನಾಡಿದರು. ಹಿರಿಯ ಯಕ್ಷಗಾನ ಕಲಾವಿದ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠದ ಅಧ್ಯಕ್ಷ ಸರಪಾಡಿ ಅಶೋಕ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ ಧಾರ್ಮಿಕತೆಗೆ ಪೂರಕವಾಗಿ ಯಕ್ಷಗಾನವು ಸೇವಾರೂಪವಾಗಿ ನಡೆಯುತ್ತಿದೆ. ನಾಟ್ಯ ತರಗತಿಗಳು ಪ್ರಾರಂಭವಾದಷ್ಟು ಯಕ್ಷಗಾನಕ್ಕೆ ಮೆರುಗು ಬರುತ್ತದೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಯಕ್ಷ ನಾಟ್ಯ ಶಿಕ್ಷಕ ಸುನಿಲ್ ಪಲ್ಲಮಜಲು, ಅಮ್ಟಾಡಿ ಪಂಚಾಯತ್ ಉಪಾಧ್ಯಕ್ಷ ಸುನಿಲ್ ಕಾಯರ್‌ಮಾರ್, ಪಂಚಾಯತ್ ಸದಸ್ಯ ಯಶವಂತ ಶೆಟ್ಟಿ, ಪಂಚಾಯತ್ ಸದಸ್ಯೆ ನಳಿನಿ, ಕೆಂಪುಗುಡ್ಡೆ ವಿಶ್ವ ಹಿಂದೂ ಪರಿಷತ್ತ್ ಅಧ್ಯಕ್ಷ ದಿವಾಕರ ಕಿನ್ನಿಬೆಟ್ಟು, ಕಾಳಬೈರವ ಶಾಖೆ ಯೋಗೀಶ್ ಕೆಂಪುಗುಡ್ಡೆ, ತಂಡದ ಸಂಚಾಲಕ ವಸಂತ, ವರಕೋಡಿ ಮಕ್ಕಳ ಮೇಳ ಸಂಚಾಲಕ ಪ್ರವೀಣ್ ವರಕೋಡಿ ಉಪಸ್ಥಿತರಿದ್ದರು. ಲಕ್ಷ್ಮಣ್ ಗೌಡ ಅತಿಥಿಗಳನ್ನು ಸ್ವಾಗತಿಸಿದರು. ಸುರೇಶ್ ನಾವೂರು ಕಾರ್ಯಕ್ರಮ ನಿರೂಪಿಸಿದರು. ಮೋಹಿತ್ ಸಹಕರಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.