ಬಂಟ್ವಾಳ

ಭಾರತ ಬಂದ್ ಗೆ ಬೆಂಬಲ: ಬಿ.ಸಿ.ರೋಡಿನ ಪೊಳಲಿ ದ್ವಾರದ ಬಳಿ ಎಸ್.ಡಿ.ಪಿ.ಐ.ನಿಂದ ಪ್ರತಿಭಟನೆ

ಬಂಟ್ವಾಳ: ಕೇಂದ್ರ ಸರಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ್ ಬಂದ್ ಗೆ ಬೆಂಬಲ ಸೂಚಿಸಿ ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ಸೋಮವಾರ ಬಿ.ಸಿ.ರೋಡ್ ಕೈಕಂಬದಲ್ಲಿ ಪ್ರತಿಭಟನೆ ನಡೆಯಿತು.

ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಬೀದಿ ನಾಟಕವನ್ನು ಪ್ರದರ್ಶಿಸಿ, ಗಮನ ಸೆಳೆದರು. ಹೆದ್ದಾರಿಯ ಪಕ್ಕ ಪ್ರತಿಭಟನಾ ನಿರತರನ್ನು ಉದ್ದೆಶಿಸಿ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್, ಪ್ರಮುಖರಾ ಅಕ್ಬರ್ ಆಲಿ ಮಾತನಾಡಿ,  ಇಂದು ಸರಕಾರದ ವಿರುದ್ಧ ನಡೆಯುವ ಪ್ರತಿಭಟನೆಯನ್ನು ದೇಶದ ವಿರುದ್ಧ ನಡೆಯುವ ಪ್ರತಿಭಟನೆ ಎಂದು ಜನರ ಮನಸ್ಸನ್ನು ಬೇರೆಡೆಗೆ ತಿರುಗಿಸಲಾಗುತ್ತಿದೆ. ಕೃಷಿ ಕ್ಷೇತ್ರವನ್ನು ಬಂಡವಾಳಶಾಹಿಗಳ ಕೈ ಒಪ್ಪಿಸಲು ಸಹಕಾರಿಯಾಗುವಂತೆ ರೂಪಿಸಿರುವ ಕೇಂದ್ರ ಸರಕಾರದ ನೂತನ ಕೃಷಿ ತಿದ್ದುಪಡಿ ಕಾಯ್ದೆಗಳು ದೇಶದ ರೈತರ ಮರಣ ಶಾಸನವಾಗಿದೆ ಎಂದರು.

ಪ್ರಮುಖರಾದ ಶಾಹುಲ್ ಹಮೀದ್ ಎಸ್.ಎಚ್., ಯೂಸುಫ್ ಅಲಡ್ಕ, ಮುನೀಶ್ ಅಲಿ, ಇದ್ರೀಸ್ ಪಿ.ಜೆ., ಸಲೀಂ ಆಲಂಪಾಡಿ, ಖಲಂದರ್ ಪರ್ತಿಪಾಡಿ, ಇಕ್ಬಾಲ್ ಪರ್ಲ್ಯ, ಇಕ್ಬಾಲ್ ಮೈನ್ಸ್, ಮಜೀದ್ ಆಲಡ್ಕ, ಝಕರಿಯಾ ಗೋಳ್ತಮಜಲು, ಸತ್ತಾರ್ ಕಲ್ಲಡ್ಕ, ಕೆ.ಎಂ.ಅಬ್ದುಲ್ ರಹ್ಮಾನ್ ಉದ್ದೋಟು ಆಲಾಡಿ ಮೊದಲಾದವರು ಉಪಸ್ಥಿತರಿದ್ದರು. ಮಲಿಕ್ ಕೊಳಕೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts