ಬಂಟ್ವಾಳ

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ನಿಂದ ಮೂರು ಕುಟುಂಬಗಳಿಗೆ ನೆರವು

ಬಂಟ್ವಾಳ: ತುಳುನಾಡ ಪೊರ್ಲು ಸೇವಾ ಟ್ರಸ್ಟ್(ರಿ.) ದಕ್ಷಿಣ ಕನ್ನಡ ತನ್ನ 61ನೇ ತಿಂಗಳ ಸೇವಾ ಪಯಣದಲ್ಲಿ 3 ಕುಟುಂಬಕ್ಕೆ ಆರ್ಥಿಕ ನೆರವನ್ನು ನೀಡಿದೆ. ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸಾನಿಧ್ಯದಲ್ಲಿ ಈ ಸೇವಾಕಾರ್ಯವನ್ನು ನೆರವೇರಿಸಲಾಯಿತು.

ಉಡುಪಿ ಕುಂಜಾರಗಿರಿ ಕುರ್ಕಾಲು ಗಿರಿನಗರ ವಿಳಾಸದಲ್ಲಿ ವಾಸಿಸುತ್ತಿರುವ ಶಂಕರ ಇವರ ಪತ್ನಿ ಸರಸ್ವತಿಯವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಇವರ ಚಿಕಿತ್ಸೆಗೆ ರೂ. 20,000 ಚೆಕ್ ನ ಧನ ಸಹಾಯ, ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ದೇವಶ್ಯಮೂಡೂರು ಗ್ರಾಮ ವ್ಯಾಪಿಯ ಪಾದೆಕೋಡಿ ನಿವಾಸಿ ಅಣ್ಣುರವರಿಗೆ ಕಳೆದ 10 ತಿಂಗಳುಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು  ಇವರ ಚಿಕಿತ್ಸೆಗೆ ರೂ. 10,000  ಚೆಕ್ ನ ಧನ ಸಹಾಯ ಮತ್ತು ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ವಗ್ಗದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ರಮೇಶ್ ಆಚಾರ್ಯರವರಿಗೆ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದು, ಇವರ ಪತ್ನಿ ಕೂಡ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇವರಿಬ್ಬರ ಚಿಕಿತ್ಸೆಗೆ ರೂ. 10,000 ಚೆಕ್ ನ ಧನ ಸಹಾಯವನ್ನು ಮಾಡಲಾಯಿತು. ಈ ಸಮಯದಲ್ಲಿ ಟ್ರಸ್ಟ್ ನ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.