ಸಂಗಬೆಟ್ಟು ಗ್ರಾಮ: ಕಾಂಗ್ರೆಸ್ ಪಕ್ಷದಿಂದ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮ, ಮಾಜಿ ಸಚಿವ ರೈ ಅವರಿಂದ ಚಾಲನೆ

ಬಂಟ್ವಾಳ: ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಗಬೆಟ್ಟು ಗ್ರಾಮ ಪಂಚಾಯತ್ಗೆ ಒಳಪಟ್ಟಂತೆ ನಮ್ಮ ನಡೆ, ಬೂತ್ ಕಡೆ ಕಾರ್ಯಕ್ರಮ ನಡೆಯಿತು.

ಮಾಜಿ ಸಚಿವ ತೆಂಗಿನ ಸೆಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೂತ್ ಸಮಿತಿ ಅಧ್ಯಕ್ಷರುಗಳಾದ ವಾಮನ್ ಬುನ್ನನ್ , ದಾಮೋದರ್ ನಾಯಕ್, ಜಯಕರ್ ಶೆಟ್ಟಿ, ಅಶೋಕ್ ಪೂಜಾರಿ, ಹಮೀದ್ ಎಸ್ , ದೇವರಾಜ್ ಸಾಲ್ಯಾನ್ ಇವರ ನಿವಾಸದಲ್ಲಿ ತೆಂಗಿನ ಸಸಿಯನ್ನು ನೆಟ್ಟ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಒಂದು ಕಲ್ಪವೃಕ್ಷದಂತೆ ಬುಡದಿಂದ ಗರಿ ತನಕ ಯಾವ ರೀತಿ ಅದು ಸದುಪಯೋಗಕ್ಕೆ ಬರುತ್ತದೊ ಅದೇ ರೀತಿ ಕಾಂಗ್ರೆಸ್ ಪಕ್ಷ ಕೂಡ ಎಲ್ಲಾ ಜಾತಿ, ಧರ್ಮ, ಭಾಷೆಯ ಜನರಿಗೆ ಹಾಗೂ ಮುಖ್ಯವಾಗಿ ಬಡವರಿಗೆ ಸಹಕಾರ ಮಾಡುವಂತಹ ಬಲಿಷ್ಠ ಪಕ್ಷವಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಮಾತನಾಡಿ ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅಪಪ್ರಚಾರಗಳಿಗೆ ಪ್ರತ್ಯುತ್ತರ ಕೊಡುವ ಮುಖಂತರ ಬೂತ್ ಮಟ್ಟದಿಂದಲೇ ಪಕ್ಷವನ್ನು ಬಲಪಡಿಸೋಣ ಎಂದರು. ಸಂದರ್ಭದಲ್ಲಿ ಸಂಗಬೆಟ್ಟು ವಲಯ ಕಾಂಗ್ರೆಸ್ ಅಧ್ಯಕ್ಷರಾದ ದಿನೇಶ್ ಶೆಟ್ಟಿಗಾರ್, ಕರ್ಪೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಗಣೇಶ್ ನಾಯಕ್, ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್,ಚಂದ್ರಪ್ರಕಾಶ್ ಶೆಟ್ಟಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮ ಮೋರಸ್, ಮುಖಂಡರಾದ ಡಾ.ಪ್ರಭಾ ಚಂದ್ರ, ಗೋಪಾಲ ಬಂಗೇರಾ, ರಮೇಶ್ ನಾಯಕ್ ರಾಯಿ, ಜಗದೀಶ್ ಕೊಯಿಲ,ಸುಧಾಕರ್ ಶೆಣೈ, ಸದಾನಂದ ಶೆಟ್ಟಿ ಕಾವಳಕಟ್ಟೆ, ದೇವಪ್ಪ ಕರ್ಕೇರಾ, ಶೇಖರ್ ನಾಯ್ಕ್, ಶಶಿಧರ್ ಪೂಜಾರಿ, ದಾಮೋದರ ಪೂಜಾರಿಸುಭಾಶಿನಿ, ಸದಾಶಿವ ಪೂಜಾರಿ, ಸುರೇಂದ್ರ ಪೂಜಾರಿ, ಶಿವಾನಂದ ರೈ, ಅಶೋಕ್ ಆಚಾರಿ, ರವೀಂದ್ರ ಪ್ರಭು, ಜಲಜ ಪೂಜಾರಿ, ಮೊಹಮ್ಮದ್ ಶರೀಫ್, ಫಾರುಕ್ ಕೆರೆಬಳಿ, ಸೀತಾರಾಮ ಶೆಟ್ಟಿ, ರಾಜೇಶ್ ಪೂಜಾರಿ, ಅಣ್ಣಿ ಪೂಜಾರಿ, ಗಣೇಶ್ ಸಾಲ್ಯಾನ್, ದಾಮೋದರ್ ಪೂಜಾರಿ ಮಂಚಕಲ್ಲು, ಮೊಹಮ್ಮದ್ ಝೂಬಿ, ನರ್ಮದಾ ನಾಯಕ್, ಮೋನಾಕ ಕಲ್ಕುರಿ, ಫಾರೂಕ್ ಕಲ್ಕುರಿ ಹಾಗೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಂಗಬೆಟ್ಟು ಗ್ರಾಮ: ಕಾಂಗ್ರೆಸ್ ಪಕ್ಷದಿಂದ ನಮ್ಮ ನಡೆ ಬೂತ್ ಕಡೆ ಕಾರ್ಯಕ್ರಮ, ಮಾಜಿ ಸಚಿವ ರೈ ಅವರಿಂದ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*