ಬಂಟ್ವಾಳ

ನವದೆಹಲಿಯ ಸ್ವಚ್ಛ ಭಾರತ್ ಮಿಷನ್ ಕಾರ್ಯಕ್ರಮಕ್ಕೆ ಬಂಟ್ವಾಳ ಪುರಸಭೆ ಅಧ್ಯಕ್ಷ, ಸಿಒಗೆ ಆಹ್ವಾನ

ರಾಜ್ಯದ ಒಟ್ಟು 13 ಮಂದಿಗೆ ಈ ಆಹ್ವಾನ ಗೌರವ

ಬಂಟ್ವಾಳ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಭಾರತ ಮಿಷನ್ 2.0 ಕಾರ್ಯಕ್ರಮದ ಉದ್ಘಾಟನೆ ಹಾಗೂ ಅಮೃತ ಯೋಜನೆ ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ಅಕ್ಟೋಬರ್ 1ರಂದು ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲೆಯ ಬಂಟ್ವಾಳ ಪುರಸಭೆ ಅಧ್ಯಕ್ಷ ಮಹಮ್ಮದ್ ಶರೀಫ್ ಮತ್ತು ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ ಅವರನ್ನು ಕೇಂದ್ರ ಸರ್ಕಾರ ಆಹ್ವಾನಿಸಿದೆ.

ಮಹಮ್ಮದ್ ಶರೀಫ್

ನವದೆಹಲಿಯ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ಕಾರ್ಯಕ್ರಮದಲ್ಲಿ ರಾಜ್ಯದ 13 ಮಂದಿಯನ್ನು ಆಹ್ವಾನಿಸಲಾಗಿದ್ದು, ಅವರ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳವೂ ಒಂದು.

ಜಾಹೀರಾತು
ಲೀನಾ ಬ್ರಿಟ್ಟೊ

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.