ಬಂಟ್ವಾಳ: ಹಿಂದು ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ದೇವಸ್ಥಾನವನ್ನು ಪ್ರವೇಶಿಸಬೇಕಾಗಿ ವಿನಂತಿ.. ಈ ಸಂದೇಶವಿರುವ ಬೋರ್ಡ್ ಅನ್ನು ವಿಶ್ವಹಿಂದು ಪರಿಷತ್ತು, ಬಜರಂಗದಳದ ವತಿಯಿಂದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಮುಂಭಾಗ ಅಳವಡಿಸಲಾಗಿದೆ.
ವಿಶ್ವ ಹಿಂದು ಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಕಳೆದ ಏಪ್ರಿಲ್ ತಿಂಗಳಿನಲ್ಲಿ 3000 ಜನ ಕಾರ್ಯಕರ್ತರು ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಿದ್ದರು. ಅದರಂತೆ ಆದಷ್ಟು ಬೇಗ ವಸ್ತ್ರಸಂಹಿತೆ ನೀತಿ ಜಾರಿಯಾಗಬೇಕೆಂದು ಬಂಟ್ವಾಳ ಪ್ರಖಂಡದ ವತಿಯಿಂದ ದೇವಾಸ್ಥಾನದಲ್ಲಿ ಶುಕ್ರವಾರ ವಸ್ತ್ರಸಂಹಿತೆ ಬೋರ್ಡ್ ಅಳವಡಿಸಲಾಯಿತು. ಪುತ್ತೂರು ಜಿಲ್ಲಾ ಸಂಚಾಲಕರಾದ ಭರತ್ ಕುಮ್ಡೆಲ್, ಜಿಲ್ಲಾ ಸಹ ಸಂಚಾಲಕ್ ಗುರುರಾಜ್ ಬಂಟ್ವಾಳ್, ವಿ.ಹಿಂ.ಪ ಬಂಟ್ವಾಳ ಪ್ರಖಂಡ ಕಾರ್ಯದರ್ಶಿ ಸುರೇಶ್ ಬೆಂಜನಪದವು, ಬಜರಂಗದಳ ಪ್ರಖಂಡ ಸಂಚಾಲಕ್ ಶಿವಪ್ರಸಾದ್ ತುಂಬೆ, ಸಂತೋಷ್ ಕೆ ಸರಪಾಡಿ, ದೀಪಕ್ ಬಂಟ್ವಾಳ್, ಪ್ರಸಾದ್ ಬೆಂಜನಪದವು, ರತೀಶ್ ರಾಮಲ್ ಕಟ್ಟೆ, ಪ್ರವೀಣ್ ಕುಂಟಾಲಪಲ್ಕೆ, ಅಶ್ವತ್ ಪೂಂಜಾಲ್ ಕಟ್ಟೆ, ಪೋಳಲಿ ಖಂಡ ಸಮಿತಿ ಹಾಗೂ ಘಟಕದ ಪ್ರಮುಖರು ಉಪಸ್ಥಿತರಿದ್ದರು
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಪೊಳಲಿಯಲ್ಲಿ ವಿಹಿಂಪ, ಬಜರಂಗದಳದಿಂದ ಬೋರ್ಡ್ – ಸಾಂಪ್ರದಾಯಿಕ ವಸ್ತ್ರ ಧರಿಸಲು ವಿನಂತಿ"
Be the first to comment on "ಪೊಳಲಿಯಲ್ಲಿ ವಿಹಿಂಪ, ಬಜರಂಗದಳದಿಂದ ಬೋರ್ಡ್ – ಸಾಂಪ್ರದಾಯಿಕ ವಸ್ತ್ರ ಧರಿಸಲು ವಿನಂತಿ"