ಪಚ್ಚಿನಡ್ಕ ತೊಡಂಬಿಲ ಚರ್ಚ್ ಹಾಲ್ ನಲ್ಲಿ ರಕ್ತದಾನ ಶಿಬಿರ, ಆರೋಗ್ಯ ಕಾರ್ಡ್ ವಿತರಣೆ

ಬಂಟ್ವಾಳ: ಮಹಾತ್ಮ ಗಾಂಧಿ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಬಳಿಕ ಸ್ವಾತಂತ್ರ್ಯ ಚಳವಳಿಗೆ ವೇಗ ಸಿಕ್ಕಿದರೂ ಎಲ್ಲಿಯೂ ಹಿಂಸೆ, ದೊಂಬಿಗೆ ಪ್ರಚೋದನೆ ನೀಡದೆ ಅಖಂಡ ಭಾರತಕ್ಕೆ ಸ್ವಾತಂತ್ರ್ಯವನ್ನು ತರುವಲ್ಲಿ ಯಶಸ್ವಿಯಾದ ಮಹಾತ್ಮ ಗಾಂಧಿಯವರ ಅಹಿಂಸಾ ಸಿದ್ದಾಂತ ಇಂದಿನ ಯುವ ಜನತೆಗೆ ಮನವರಿಕೆ ಮಾಡಿಕೊಡುವ ಅನಿವಾರ್ಯತೆ ಇದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ತಾಲೂಕಿನ ಪಚ್ಚನಡ್ಕ ತೊಡಂಬಿಲ ಚರ್ಚ್ ಹಾಲ್ ನಲ್ಲಿ ಶನಿವಾರ ನಡೆದ ಕಳ್ಳಿಗೆ, ಅಮ್ಮುಂಜೆ, ಕರಿಯಂಗಳ, ತೆಂಕಬೆಳ್ಳೂರು, ಬಡಗಬೆಳ್ಳೂರು, ಕುರಿಯಾಲ, ಅಮ್ಟಾಡಿ ಮತ್ತು ಅರಳ ವಲಯ ಕಾಂಗ್ರೆಸ್ ಸಮಿತಿ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆ ಮಂಗಳೂರು ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಉಚಿತ ಕಣ್ಣಿನ ಮತ್ತು ಆರೋಗ್ಯ ತಪಾಸಣಾ ಶಿಬಿರ, ಉಚಿತ ಆರೋಗ್ಯ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ರಸಕ್ತ ಗಾಂಧಿ ಅವರ ಅಹಿಂಸೆ ಸಿದ್ದಾಂತದ ಬಗ್ಗೆ ಮಾತನಾಡಬೇಕಾದ ಅನಿವಾರ್ಯ ಇದೆ. ಅನೇಕ ಜಾತಿ, ಧರ್ಮ, ಭಾಷೆಯ ಜನರನ್ನು ಒಳಗೊಂಡಿರುವ ಅಖಂಡ ಭಾರತವನ್ನು ಒಗ್ಗೂಡಿಸಿ ಅಹಿಂಸಾ ಮಾರ್ಗದ ಮೂಲಕ ಸ್ವಾತಂತ್ರ್ಯ ಹೋರಾಟ ಮಾಡುವುದು ಸುಲಭದ ಕೆಲಸ ಆಗಿರಲಿಲ್ಲ. ಆದರೂ ಮಹಾತ್ಮಾ ಗಾಂಧಿ ಅದರಲ್ಲಿ ಯಶಸ್ಸು ಖಂಡಿದ್ದಾರೆ. ಅದೇ ಮಾರ್ಗದಲ್ಲಿ ಇಂದು ನಾವೂ ಮುಂದುವರಿಯಬೇಕು ಎಂದು ಅವರು ಹೇಳಿದರು.

ವೇದಿಕೆಯಲ್ಲಿ ನಿಂತು ಗಾಂಧೀಜಿ ಬಗ್ಗೆ ಮಾತನಾಡುವುದು ಸುಲಭ. ಆದರೆ ಅವರ ಅಹಿಂಸಾ ಸಿದ್ದಾಂತ ನಾವೆಷ್ಟು ಪಾಲಿಸುತ್ತೇವೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡುವುದು ಕಷ್ಟ. ಅಹಿಂಸಾ ಚಳವಳಿಯನ್ನು ದೇಶಕ್ಕೆ ಪರಿಚಯಿಸಿದ ಮಹಾತ್ಮ ಗಾಂಧೀಜಿ ವೈರಿಯನ್ನು ಪ್ರೀತಿಸು ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ್ದಾರೆ. ಯಾವ ಧರ್ಮವೂ ಹಿಂಸೆಯನ್ನು ಪ್ರೋತ್ಸಾಹಿಸುವುದಿಲ್ಲ. ಹಿಂಸೆಗೆ ಹಿಂಸೆ ಉತ್ತರವಲ್ಲ. ಹಿಂಸೆಗೆ ಅಹಿಂಸೆ ಉತ್ತರ. ಕೋಮುವಾದ, ಮತೀಯವಾದಕ್ಕೆ ಕೋಮುವಾದ ಮತೀಯವಾದ ಉತ್ತರ ಅಲ್ಲ. ಅದಕ್ಕೆ ಜಾತ್ಯಾತೀತವಾದವೇ ಉತ್ತರ ಎಂದು ಅವರು ಹೇಳಿದರು. ದೇಶದ ಪ್ರತೀಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ದೊರಕಬೇಕೆಂಬ ಕನಸು ಗಾಂಧೀಜಿಯವರದ್ದಾಗಿತ್ತು. ಪ್ರಜಾಪ್ರಭುತ್ವವನ್ನು ಬಲಪಡಿಸುವ ಕೆಲಸವನ್ನು ಗಾಂಧೀಜಿ ಮಾಡಿದ್ದಾರೆ. ಆದರೆ ಇಂದು ಪ್ರಜಾಪ್ರಭುತ್ವದ ಮೌಲ್ಯ ಕುಸಿಯುತ್ತಿದೆ. ಪ್ರಜಾಪ್ರಭುತ್ವವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಕೆಲಸ ನಡೆಯಬೇಕು ಎಂದು ಅವರು ಕರೆ ನೀಡಿದರು.ದೇಶಕ್ಕಾಗಿ ಹುತಾತ್ಮ, ಬಲಿದಾನ ಮಾಡಿದವರಿಗೆ ಅಗೌರವ, ಅಪಮಾನ ಮಾಡುವ ಕೆಲಸ ಸಲ್ಲದು. ದೇಶ ಎಂದರೆ ಒಂದು ವ್ಯಕ್ತಿ, ಒಂದು ಪಕ್ಷ, ಒಂದು ಸಂಘಟನೆ ಅಲ್ಲ. ಭಾರತ ಸುಂದರ ಮತ್ತು ಸಾಮರಸ್ಯದ ದೇಶ ಆಗಬೇಕು ಎಂದು ಅವರು ನುಡಿದರು. 

ಜಾಹೀರಾತು

ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯ ಆಡಳಿತ ನಿರ್ದೇಶಕ ಫಾದರ್ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ, ರಕ್ತನಿಧಿ ಕೇಂದ್ರದ ಚಾರು ಕೋಸ್ಲಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ,ವಲಯ ಅಧ್ಯಕ್ಷರಾದ ಶಿವಪ್ರಸಾದ್ ಕನಪಾಡಿ,ಜಿಪಂ ಮಾಜಿ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಬಂಟ್ವಾಳ ತಾಪಂ ಮಾಜಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಕಾಂಗ್ರೆಸ್ ಪ್ರಮುಖರಾದ ಸುದರ್ಶನ್ ಜೈನ್,  ಸಂಜೀವ ಪೂಜಾರಿ,ಶ್ರೀಮತಿ ಮಲ್ಲಿಕಾ ಶೆಟ್ಟಿ, ಫ್ಲೋಸಿ ಡಿಸೋಜ,ಶ್ರೀಮತಿ ಮಲ್ಲಿಕಾ ಪಕ್ಕಳ,ರಮೇಶ್ ಪಚ್ಚಿನಡ್ಕ, ವಿಜಯ್ ಕಳ್ಳಿಗೆ,ಲೀನಾ ಮೊಂತೇರೋ,ರವಿರಾಜ್ ಜೈನ್, ರೋಷನ್ ರೈ ಮೊದಲಾದವರು ಉಪಸ್ಥಿತರಿದ್ದರು. ಚಂದ್ರಶೇಖರ ಭಂಡಾರಿ ಸ್ವಾಗತಿಸಿದರು. ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹೀಂ ನವಾಝ್ ಬಡಕಬೈಲ್ ವಂದಿಸಿದರು.‌ ಅಬ್ದುಲ್ ಹಕೀಂ ಕಲಾಯಿ‌ ಕಾಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಪಚ್ಚಿನಡ್ಕ ತೊಡಂಬಿಲ ಚರ್ಚ್ ಹಾಲ್ ನಲ್ಲಿ ರಕ್ತದಾನ ಶಿಬಿರ, ಆರೋಗ್ಯ ಕಾರ್ಡ್ ವಿತರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*