ಬಂಟ್ವಾಳ

ಬಿ ಮೂಡ ಪಿ.ಯು.ಕಾಲೇಜಲ್ಲಿ ಗಾಂಧೀ ಜಯಂತಿ ಆಚರಣೆ

ಬಂಟ್ವಾಳ:  ಸರಕಾರಿ ಪದವಿ ಪೂರ್ವ ಕಾಲೇಜು ಬಿ.ಮೂಡ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಗಾಂಧೀ ಜಯಂತಿಯನ್ನು ಕಾಲೇಜು ಆವರಣದ ಸ್ವಚ್ಛತಾ ಕಾರ್ಯಗಳೊಂದಿಗೆ ಆಚರಿಸಲಾಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಪ್ರಾಂಶುಪಾಲ ಯೂಸುಫ್ ವಿಟ್ಲ ಅವರು ಗಾಂಧೀಜಿಯವರ ಬೋಧನೆಗಳು ಸಾರ್ವಕಾಲಿಕವಾಗಿ ಅನ್ವಯಿಸಬಹುದಾದ ಆದರ್ಶ ಗಳಾಗಿದ್ದು ಅವರ ಬದುಕಿನ ಹೆಜ್ಜೆಗಳು ದೃಢವಾಗಿರುವುದಕ್ಕೆ ಅವರು ನಡೆದ ಸತ್ಯ ಮಾರ್ಗವೇ ಕಾರಣ ಎಂದು ಹೇಳಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಗಾಂಧೀ ಚಿಂತನೆಗಳನ್ನು ಹಂಚಿಕೊಂಡರು. ಎನ್ಎಸ್ಎಸ್ ಯೋಜನಾಧಿಕಾರಿ, ಉಪನ್ಯಾಸಕ ಬಾಲಕೃಷ್ಣ ನಾಯ್ಕ್  ಕೆ. ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿ ಸಂಧ್ಯಾ ವಂದಿಸಿದರು.ಉಪನ್ಯಾಸಕ ದಾಮೋದರ ಇ. ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಎನ್ಎಸ್ಎಸ್ ವಿದ್ಯಾರ್ಥಿಗಳು ಕಾಲೇಜು ರಸ್ತೆಯ ಬದಿ ಹಾಗೂ ಆವರಣದ ಗಿಡಗಂಟೆಗಳನ್ನು ಕಡಿದು ಸ್ವಚ್ಛಗೊಳಿಸಿದರು.  ಈ  ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ, ಕಾಲೇಜು ಅಭಿವೃದ್ಧಿ ಸಮಿತಿಯ ಮಾಜಿ ಸದಸ್ಯ ಡಿ.ಎಂ.ಕುಲಾಲ್ ಮತ್ತು ಹಾಲಿ ಸದಸ್ಯರಾದ ಫಾರೂಕ್ ಗೂಡಿನಬಳಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.