ಬಂಟ್ವಾಳ

ನಗರಭಜನೆಯಲ್ಲಿ ಸಂಗ್ರಹಿತ ಹಣ ಹಸ್ತಾಂತರ

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದ ಹಿನ್ನೆಲೆಯಲ್ಲಿ ಸರಪಾಡಿ ಯುವಕ ಮಂಡಲದ ವತಿಯಿಂದ ಆಯೋಜಿಸಿದ್ದ 6ನೇ ವರ್ಷದ ನಗರ ಭಜನೆಯಲ್ಲಿ ಸಂಗ್ರಹಗೊಂಡ 3,63,055 ರೂ.ಗಳ ಚೆಕ್ಕನ್ನು ಭಾನುವಾರ ದೇವಸ್ಥಾನದಲ್ಲಿ ಜೀರ್ಣೋದ್ಧಾರ ಸಮಿತಿಗೆ ಹಸ್ತಾಂತರಿಸಲಾಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಶಂಕರನಾರಾಯಣ ಹೊಳ್ಳ ಅವರು ಪ್ರಾರ್ಥನೆ ನೆರವೇರಿಸಿದರು. ಯುವಕ ಮಂಡಲದ ಅಧ್ಯಕ್ಷ ಸಂತೋಷ್ ಶೆಟ್ಟಿ ಸರಪಾಡಿ ಅವರು ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾರಾಯಣ ಶೆಟ್ಟಿ ಹೊಳ್ಳರಗುತ್ತು ಅವರಿಗೆ ಚೆಕ್ ಹಸ್ತಾಂತರಿಸಿದರು. ಈ ತನಕ 6 ವರ್ಷಗಳ ನಗರ ಭಜನೆಯಲ್ಲಿ ಸಂಗ್ರಹಗೊಂಡ ಒಟ್ಟು ಮೊತ್ತ 14.75 ಲಕ್ಷ ರೂ.ಗಳನ್ನು ದೇವಸ್ಥಾನಕ್ಕೆ ಹಸ್ತಾಂತರಿಸಲಾಗಿದೆ. ಪ್ರಮುಖರಾದ ಉಮೇಶ್ ಆಳ್ವ ಕೊಟ್ಟುಂಜ, ರಾಧಾಕೃಷ್ಣ ರೈ ಕೊಟ್ಟುಂಜ, ರಾಧಾಕೃಷ್ಣ ಶೆಟ್ಟಿ ಕಲ್ಕೊಟ್ಟೆ, ಆನಂದ ಶೆಟ್ಟಿ ಆರುಮುಡಿ, ದಯಾನಂದ ದರ್ಖಾಸು, ರಾಹುಲ್ ಕೋಟ್ಯಾನ್ ದರ್ಖಾಸು, ಚೇತನ್ ಬಜ, ಯೋಗೀಶ್ ಎಲ್, ಯೋಗೀಶ್ ಗೌಡ ನೀರೊಲ್ಬೆ, ಕಿಶನ್ ಸರಪಾಡಿ, ವಚನ್ ಬಜ, ಪ್ರವೀಣ್ ಗೌಡ ಉಪಸ್ಥಿತರಿದ್ದರು. 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ