ಬಂಟ್ವಾಳ

ಮಳೆ ಹಾನಿ: ಸಿಎಂ, ಸಂಸದ, ಸಚಿವರ ಬಳಿ ನಿಯೋಗ ತೆರಳಿ ವಿಶೇಷ ಪರಿಹಾರಕ್ಕೆ ಒತ್ತಾಯ: ಶಾಸಕ ರಾಜೇಶ್ ನಾಯ್ಕ್

www.bantwalnews.com Edited and Owned by – Harish Mambady Watsapp No: 9448548127

ಬಂಟ್ವಾಳ: ಕಳೆದ ಕೆಲ ದಿನಗಳಿಂದ ತಾಲೂಕಿನ ವಿವಿಧೆಡೆ ಉಂಟಾದ ಮಳೆ ಹಾನಿ ಕುರಿತು ಸಿಎಂ ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಬಳಿ ನಿಯೋಗದೊಂದಿಗೆ ತೆರಳಿ ವಿಶೇಷ ಪರಿಹಾರಕ್ಕೆ ಒತ್ತಾಯಿಸಲಾಗುವುದು ಎಂದು ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.

ಕಾವಳಮುಡೂರು ಮತ್ತಿತರ ಪ್ರದೇಶಗಳಲ್ಲಿ ಮಳೆ ಹಾನಿಯುಂಟಾದ ಪ್ರದೇಶಗಳಿಗೆ ಭೇಟಿ ನೀಡಿದ ಬಳಿಕ ಅವರು ಸಂತ್ರಸ್ತರಿಗೆ ಈ ಆಶ್ವಾಸನೆಯನ್ನು ನೀಡಿದರು.

ತಾಲೂಕಿನಲ್ಲಿ ಹಾನಿಯಾದ ಕೃಷಿಯ ಬಗ್ಗೆ ಹಾಗೂ ನಷ್ಟದ  ಅಂದಾಜುಪಟ್ಟಿಯನ್ನು ಶೀಘ್ರವಾಗಿ ತಯಾರಿಸಿ ವರದಿ ನೀಡುವಂತೆ  ಅಧಿಕಾರಿಗಳಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ ಅವರು, ತಾಲೂಕಿನಲ್ಲಿ ಸುಮಾರು 30 ಸಾವಿರಕ್ಕೂ ಮಿಕ್ಕಿ ಫಲನೀಡುವ ಅಡಿಕೆ ಮರ , ಸಾವಿರಾರು ತೆಂಗಿನ ಮರ, ಲಕ್ಷಾಂತರ ರೂ ಬೆಲೆ ಬಾಳುವ ವಿವಿಧ ಜಾತಿಯ ಮರಗಳು,  100 ಕ್ಕೂ ಅಧಿಕ ವಾಸದ ಮನೆಗಳಿಗೆ  ಸುಂಟರಗಾಳಿಯಿಂದ  ಹಾನಿಯಾಗಿರುವ ಬಗ್ಗೆ ಅಧಿಕಾರಿ ಗಳು ಮಾಹಿತಿ ನೀಡಿದ್ದಾರೆ.ಜೊತೆಗೆ ಮೆಸ್ಕಾಂ ಇಲಾಖೆಗೂ ನಷ್ಟವುಂಟಾಗಿದೆ ಎದರು. ಈ ಸಂದರ್ಭ ಸ್ಥಳೀಯ ಜನಪ್ರತಿನಿಧಿಗಳು, ಬಿಜೆಪಿ ಪಕ್ಷದ ಪ್ರಮುಖರು, ಅಧಿಕಾರಿಗಳು, ಸ್ಥಳೀಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ