ಬಿರುಗಾಳಿಯಿಂದ ಹಾನಿಗೀಡಾದವರಿಗೆ ಸಮರೋಪಾದಿಯಲ್ಲಿ ಪರಿಹಾರ, ವಿಶೇಷ ಪ್ಯಾಕೇಜ್ ನಡಿ ನೆರವು – ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯ

ಮಾಜಿ ಸಚಿವ ಬಿ.ರಮಾನಾಥ ರೈ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಬಂಟ್ವಾಳ ತಾಲೂಕಿನ ಹಲವೆಡೆ ಪ್ರಾಕೃತಿಕ ವಿಕೋಪದಿಂದ ಹಾನಿಗಳುಂಟಾಗಿದ್ದು, ಇದನ್ನು ವಿಶೇಷ ಪ್ಯಾಕೇಜ್ ಮೂಲಕ ಶೀಘ್ರಾನುಶೀಘ್ರ ಯುದ್ಧೋಪಾದಿಯಲ್ಲಿ ಪರಿಹಾರ ಒದಗಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ಬುಧವಾರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಳೆರೋಗ ಪರಿಹಾರವೇ ಕಳೆದ ಎರಡು ವರ್ಷಗಳಲ್ಲಿ ಜನರ ಕೈಗೆ ಬಂದಿಲ್ಲ. ಇನ್ನು ಪ್ರಾಕೃತಿಕ ವಿಕೋಪದಲ್ಲಿ ಹಾನಿಗೊಳಗಾದವರಿಗೂ ಇದೇ ರೀತಿ ವಿಳಂಬ ಧೋರಣೆ ಮಾಡದೆ ವಿಶೇಷ ಪ್ಯಾಕೇಜ್ ಅನ್ನು ಶೀಘ್ರ ಒದಗಿಸಬೇಕು ಎಂದು ಒತ್ತಾಯಿಸಿದರು. ತಾನು ಸಚಿವನಾಗಿದ್ದಾಗ ಇಂಥದ್ದೇ ಸಂದರ್ಭದಲ್ಲಿ ನರಿಕೊಂಬು ಮತ್ತು ಅನಂತಾಡಿ ಗ್ರಾಮದ ಜನರಿಗೆ 24 ತಾಸಿನೊಳಗೆ ಪರಿಹಾರವನ್ನು ಜನರ ಕೈಗೆ ತಹಸೀಲ್ದಾರ್ ಮೂಲಕ ಒದಗಿಸುವ ಕೆಲಸ ಮಾಡಿದ್ದನ್ನು ಜ್ಞಾಪಿಸಿದ ರೈ, ಯಾರಿಗೆ ಎಷ್ಟು ಹಾನಿಯಾಗಿದೆ ಎಂಬುದನ್ನು ಇಲಾಖಾಧಿಕಾರಿಗಳು ಸೂಕ್ತ ಸಮೀಕ್ಷೆ ನಡೆಸಿ, ನಷ್ಟಕ್ಕೊಳಗಾದವರಿಗೆ ಪರಿಹಾರವನ್ನು ತುರ್ತಾಗಿ ಒದಗಿಸುವಂತೆ ಆಗ್ರಹಿಸಿದರು. ತಾನು ಈಗಾಗಲೇ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ್ದು, ಹಲವೆಡೆ ವ್ಯಾಪಕ ಹಾನಿ ಸಂಭವಿಸಿವೆ ಎಂದವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ  ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಸುದರ್ಶನ ಜೈನ್, ಅಬ್ಬಾಸ್ ಆಲಿ, ಚಂದ್ರಶೇಖರ ಪೂಜಾರಿ, ಸುರೇಶ್ ಜೋರ, ಆನಂದ ನರಿಕೊಂಬು, ದೇವಪ್ಪ ಕುಲಾಲ್ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿರುಗಾಳಿಯಿಂದ ಹಾನಿಗೀಡಾದವರಿಗೆ ಸಮರೋಪಾದಿಯಲ್ಲಿ ಪರಿಹಾರ, ವಿಶೇಷ ಪ್ಯಾಕೇಜ್ ನಡಿ ನೆರವು – ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*