ಬಂಟ್ವಾಳ

ಬಿರುಗಾಳಿಯಿಂದ ಹಾನಿಗೀಡಾದವರಿಗೆ ಸಮರೋಪಾದಿಯಲ್ಲಿ ಪರಿಹಾರ, ವಿಶೇಷ ಪ್ಯಾಕೇಜ್ ನಡಿ ನೆರವು – ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯ

ಮಾಜಿ ಸಚಿವ ಬಿ.ರಮಾನಾಥ ರೈ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಬಂಟ್ವಾಳ ತಾಲೂಕಿನ ಹಲವೆಡೆ ಪ್ರಾಕೃತಿಕ ವಿಕೋಪದಿಂದ ಹಾನಿಗಳುಂಟಾಗಿದ್ದು, ಇದನ್ನು ವಿಶೇಷ ಪ್ಯಾಕೇಜ್ ಮೂಲಕ ಶೀಘ್ರಾನುಶೀಘ್ರ ಯುದ್ಧೋಪಾದಿಯಲ್ಲಿ ಪರಿಹಾರ ಒದಗಿಸಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಒತ್ತಾಯಿಸಿದ್ದಾರೆ.

ಬುಧವಾರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಳೆರೋಗ ಪರಿಹಾರವೇ ಕಳೆದ ಎರಡು ವರ್ಷಗಳಲ್ಲಿ ಜನರ ಕೈಗೆ ಬಂದಿಲ್ಲ. ಇನ್ನು ಪ್ರಾಕೃತಿಕ ವಿಕೋಪದಲ್ಲಿ ಹಾನಿಗೊಳಗಾದವರಿಗೂ ಇದೇ ರೀತಿ ವಿಳಂಬ ಧೋರಣೆ ಮಾಡದೆ ವಿಶೇಷ ಪ್ಯಾಕೇಜ್ ಅನ್ನು ಶೀಘ್ರ ಒದಗಿಸಬೇಕು ಎಂದು ಒತ್ತಾಯಿಸಿದರು. ತಾನು ಸಚಿವನಾಗಿದ್ದಾಗ ಇಂಥದ್ದೇ ಸಂದರ್ಭದಲ್ಲಿ ನರಿಕೊಂಬು ಮತ್ತು ಅನಂತಾಡಿ ಗ್ರಾಮದ ಜನರಿಗೆ 24 ತಾಸಿನೊಳಗೆ ಪರಿಹಾರವನ್ನು ಜನರ ಕೈಗೆ ತಹಸೀಲ್ದಾರ್ ಮೂಲಕ ಒದಗಿಸುವ ಕೆಲಸ ಮಾಡಿದ್ದನ್ನು ಜ್ಞಾಪಿಸಿದ ರೈ, ಯಾರಿಗೆ ಎಷ್ಟು ಹಾನಿಯಾಗಿದೆ ಎಂಬುದನ್ನು ಇಲಾಖಾಧಿಕಾರಿಗಳು ಸೂಕ್ತ ಸಮೀಕ್ಷೆ ನಡೆಸಿ, ನಷ್ಟಕ್ಕೊಳಗಾದವರಿಗೆ ಪರಿಹಾರವನ್ನು ತುರ್ತಾಗಿ ಒದಗಿಸುವಂತೆ ಆಗ್ರಹಿಸಿದರು. ತಾನು ಈಗಾಗಲೇ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ್ದು, ಹಲವೆಡೆ ವ್ಯಾಪಕ ಹಾನಿ ಸಂಭವಿಸಿವೆ ಎಂದವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ  ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಸುದರ್ಶನ ಜೈನ್, ಅಬ್ಬಾಸ್ ಆಲಿ, ಚಂದ್ರಶೇಖರ ಪೂಜಾರಿ, ಸುರೇಶ್ ಜೋರ, ಆನಂದ ನರಿಕೊಂಬು, ದೇವಪ್ಪ ಕುಲಾಲ್ ಮತ್ತಿತರರು ಇದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.