



ಬಂಟ್ವಾಳ: ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಅನಂತಾಡಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಿದರು.
ಗ್ರಾಮದ ಪುಂಜಾವಿನಿಂದ ಕೊಂಬಿಲವರೆಗಿನ ಸಂಪರ್ಕ ರಸ್ತೆಗೆ 1.5 ಕೋ.ರೂ.ಗಳ ಕಾಂಕ್ರೀಟ್ ಕಾಮಗಾರಿಗೆ ಶಿಲಾನ್ಯಾಸ, ಅನಂತಾಡಿ ಗ್ರಾ.ಪಂ.ರಾಜೀವ ಗಾಂಧಿ ಸೇವಾ ಕೇಂದ್ರ ಶಿಲಾನ್ಯಾಸ ಹಾಗೂ ಕರಿಂಕ ದೇವಸ್ಥಾನದ ಬಳಿಯ 50 ಲಕ್ಷ ರೂ. ಗಳ ಸೇತುವೆ ಉದ್ಘಾಟನೆ ನೆರವೇರಿಸಲಾಯಿತು. ಲೋಕೋಪಯೋಗಿ ಎಇಇ ಷಣ್ಮುಗಂ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಪಂಕಜ ಶೆಟ್ಟಿ, ಕಾರ್ಯದರ್ಶಿ ಜಯರಾಮ್, ಎಂಜಿನಿಯರ್ ಪ್ರಸನ್ನ, ಅಶ್ವಿನ್ ಉಪಸ್ಥಿತರಿದ್ದರು.ಗ್ರಾ.ಪಂ.ಮಾಜಿ ಅಧ್ಯಕ್ಷ ಸನತ್ ಕುಮಾರ್ ರೈ ಸ್ವಾಗತಿಸಿದರು. ಪಂಚಾಯತ್ ಅಧ್ಯಕ್ಷ ಗಣೇಶ ಪೂಜಾರಿ, ಉಪಾಧ್ಯಕ್ಷ ಕುಸುಮಾಧರ, ಬಿಜೆಪಿಯ ಪ್ರಮುಖ ನಾಯಕರು, ಗ್ರಾಪಂ ಸದಸ್ಯರು ಈ ಸಂದರ್ಭ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಅನಂತಾಡಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ"