ಬಂಟ್ವಾಳ

ಸಜಿಪನಡು ಗ್ರಾಪಂ ನೇತೃತ್ವದಲ್ಲಿ ಬಂಟ್ವಾಳ ಪುರಸಭೆ ಮುಂಭಾಗ ಸೀಟಿ ಊದಿ, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ

EDITED AND OWNED BY – HARISH MAMBADY. For Advertisements, News Contact Watsapp No: 9448548127

ಬಂಟ್ವಾಳ: ಸಜಿಪನಡು ಗ್ರಾಮದ ಕಂಚಿನಡ್ಕದವು ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಬಂಟ್ವಾಳ ಪುರಸಭೆ ಹಸಿಕಸ ಸಾಗಿಸುವುದನ್ನು ವಿರೋಧಿಸಿ  ಸಜಿಪನಡು ಗ್ರಾಮಪಂಚಾಯತ್ ನೇತೃತ್ವದಲ್ಲಿ ಬಂಟ್ವಾಳ ಪುರಸಭೆಯ ಮುಂಭಾಗ ಗುರುವಾರ ವಿಶಿಲ್ ಮಾರ್ಚ್ ನೊಂದಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಗ್ರಾಪಂ ಅಧ್ಯಕ್ಷೆ ಫೌಝಿಯಾ ಬಾನು, ಪುರಸಭೆ ಮುಂದೆ ಪ್ರತಿಭಟನೆ ನಮ್ಮ ಪ್ರಥಮ ಹೆಜ್ಜೆಯಾಗಿದ್ದು, ಇದಕ್ಕೆ ಸ್ಪಂದಿಸದಿದ್ದರೆ, ಬಂಟ್ವಾಳ ಮತ್ತು ಮಂಗಳೂರು ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸುತ್ತೇವೆ, ಅದಕ್ಕೂ ಸ್ಪಂದನೆ ಸಿಗದಿದ್ದರೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದು, ಯಾವುದೇ ಕಾರಣಕ್ಕೂ ಬಂಟ್ವಾಳದ ತ್ಯಾಜ್ಯವನ್ನು ಕಂಚಿನಡ್ಕಪದವಿಗೆ ತರಲು ಬಿಡುವುದಿಲ್ಲ ಎಂದರು.

ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಯಶವಂತ ದೇರಾಜೆ, ಗ್ರಾಪಂ ಮಾಜಿ ಅಧ್ಯಕ್ಷ ಮೊಹಮ್ಮದ್ ನಾಸಿರ್ ಸಜಿಪ, ಗ್ರಾಪಂ ಉಪಾಧ್ಯಕ್ಷ ಎಸ್.ಎನ್. ಅಬ್ದುಲ್ ರಹಿಮಾನ್, ಪ್ರಮುಖರಾದ ಸುರೇಶ್ ಬಂಗೇರ ಹಾಗೂ ಸ್ಥಳೀಯ ನಿವಾಸಿ ಮಹಿಳೆಯರು ಮಾತನಾಡಿ ಕಸವನ್ನು ರಾಶಿ ಹಾಕುವುದರಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ತಿಳಿಸಿ,ಮುಂದಕ್ಕೆ ಏನಾದರೂ ತೊಂದರೆಯಾದರೆ ಪುರಸಭೆಯೇ ಹೊಣೆ ಎಂದರು. ಗ್ರಾಪಂ ಸದಸ್ಯರಾದ ಇಸ್ಮಾಯಿಲ್ ಗೋಳಿಪಡ್ಪು, ಸುಶೀಲ, ಶೋಭಾ, ಬಬಿತಾ, ಮಮ್ತಾಝ್, ಬೀಫಾತುಮ್ಮ ಪ್ರಮುಖರಾದ ಐವನ್, ರಶೀದ್ ಸಜಿಪ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು. ಬಳಿಕ ಬಂಟ್ವಾಳ ತಾಲೂಕು ಕಚೇರಿಯ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ನರೇಂದ್ರನಾಥ ಭಟ್ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಬಂಟ್ವಾಳ ಎಸ್.ಐ. ಅವಿನಾಶ್ ನೇತೃತ್ವದಲ್ಲಿ ಪೊಲೀಸರು ಬಿಗು ಬಂದೋಬಸ್ತ್ ಏರ್ಪಡಿಸಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.